LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇವಲ 2 ದಿನದಲ್ಲಿ ಬರೋಬ್ಬರಿ ₹6,220 ಜಿಗಿದ ಚಿನ್ನದ ಬೆಲೆ ಬೆಂಗಳೂರಿನಲ್ಲಿ ಇವತ್ತಿನ ರೇಟ್ ಎಷ್ಟು ಗೊತ್ತಾ?

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಖರೀದಿಸಲು ಯೋಜಿಸುತ್ತಿರುವ ಗ್ರಾಹಕರಿಗೆ ದಿಢೀರ್ ಬಿಗ್ ಶಾಕ್ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಸಮಾಧಾನಕರವಾಗಿ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ದರ, ಈಗ ಸತತ ಎರಡು ದಿನಗಳಿಂದ ರಾಕೆಟ್ ವೇಗದಲ್ಲಿ ಜಿಗಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡರೆ, ಬೆಳ್ಳಿ ಬೆಲೆ ಕೆಜಿಗೆ ಬರೋಬ್ಬರಿ ₹5,000 ರಷ್ಟು ದುಬಾರಿಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ರಾಜಕೀಯ ಏರಿಳಿತಗಳು ಹಾಗೂ ಹೂಡಿಕೆದಾರರ ಒಲವು ಜಾಗತಿಕವಾಗಿ ಚಿನ್ನದ ದರ ದಿಢೀರ್ ಹೆಚ್ಚಾಗಲು ಪ್ರಮುಖ ಕಾರಣ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ (Spot Gold) ದರ ಪ್ರತಿ ಔನ್ಸ್‌ಗೆ ಬರೋಬ್ಬರಿ 100 ಡಾಲರ್‌ಗಳಿಗಿಂತಲೂ ಹೆಚ್ಚು ಏರಿಕೆಯಾಗುವ ಮೂಲಕ $4,172ರ ಗಡಿ ದಾಟಿದೆ. ಅದೇ ರೀತಿ ಸ್ಪಾಟ್ ಸಿಲ್ವರ್ (Spot Silver) ದರ ಕೂಡ ಶೇ. 3.34 ರಷ್ಟು ಜಿಗಿದು ಪ್ರತಿ ಔನ್ಸ್‌ಗೆ 62 ಡಾಲರ್ ದಾಟಿ ಮುನ್ನಗ್ಗುತ್ತಿದೆ. ಈ ಜಾಗತಿಕ ತಲ್ಲಣಗಳ ನೇರ ಪ್ರಭಾವ ಭಾರತೀಯ ಮಾರುಕಟ್ಟೆಯ ಮೇಲಾಗಿದೆ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ (ಜುಲೈ 3ರ ಅಪ್ಡೇಟ್):
ದಕ್ಷಿಣ ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಕಳೆದ 2 ದಿನಗಳಿಂದ ಚಿನ್ನದ ದರ ಸತತವಾಗಿ ಏರಿಕೆ ಕಾಣುತ್ತಿದೆ. ಪ್ರಸ್ತುತ ಮಾರುಕಟ್ಟೆ ದರ ಹೀಗಿದೆ:

24 ಕ್ಯಾರಟ್ (ಅಪರಂಜಿ ಚಿನ್ನ): ಪ್ರತಿ 10 ಗ್ರಾಂಗೆ ಕಳೆದ 2 ದಿನದಲ್ಲಿ ಬರೋಬ್ಬರಿ ₹6,220 ಏರಿಕೆಯಾಗಿದ್ದು, ₹1,47,000 ಕ್ಕೆ ತಲುಪಿದೆ (1 ಗ್ರಾಂಗೆ ₹14,700).

22 ಕ್ಯಾರಟ್ (ಆಭರಣ ಚಿನ್ನ): ಕಳೆದ ಎರಡು ದಿನದಲ್ಲಿ ₹5,700 ರಷ್ಟು ಏರಿಕೆಯಾಗಿದ್ದು, ₹1,34,750 ದರದಲ್ಲಿ ವಹಿವಾಟು ನಡೆಸುತ್ತಿದೆ (1 ಗ್ರಾಂಗೆ ₹13,475).

18 ಕ್ಯಾರಟ್ ಚಿನ್ನ: ಪ್ರತಿ 1 ಗ್ರಾಂಗೆ ₹11,025 ರಷ್ಟಾಗಿದೆ.

ಪ್ರತಿ ಕೆಜಿಗೆ ₹5,000 ದುಬಾರಿಯಾದ ಬೆಳ್ಳಿ

ಕಳೆದ ಒಂದು ವಾರದಿಂದ ಯಾವುದೇ ದೊಡ್ಡ ಬದಲಾವಣೆ ಕಾಣದೆ ಸ್ಥಿರವಾಗಿದ್ದ ಬೆಳ್ಳಿಯ ದರ ಕೂಡ ಚಿನ್ನದ ಹಾದಿಯನ್ನೇ ಹಿಡಿದಿದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ₹5,000 ಏರಿಕೆಯಾಗಿದ್ದು, ಬರೋಬ್ಬರಿ ₹2.5 ಲಕ್ಷದಂತೆ (ಪ್ರತಿ 1 ಗ್ರಾಂಗೆ ₹250) ವಹಿವಾಟು ನಡೆಸುತ್ತಿದೆ. ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಬೆಳ್ಳಿ ದರ ಗ್ರಾಮ್‌ಗೆ ₹260 ರಷ್ಟಿದೆ.

ಚಿನ್ನದ ಬೆಲೆ ದಿಢೀರ್ ಹೆಚ್ಚಲು ಕಾರಣಗಳೇನು?

ಯುಎಸ್ ಫೆಡ್ ರಿಸರ್ವ್ ನಿರ್ಧಾರ: ಅಮೆರಿಕನ್ ಫೆಡರಲ್ ರಿಸರ್ವ್ ಬ್ಯಾಂಕ್ ಮುಂಬರುವ ದಿನಗಳಲ್ಲಿ ಬಡ್ಡಿದರ ಇಳಿಕೆ ಮಾಡಬಹುದು ಎಂಬ ಅಂದಾಜಿನ ಹಿನ್ನೆಲೆಯಲ್ಲಿ ಜಾಗತಿಕ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದ ಕಡೆಗೆ ಮುಖ ಮಾಡಿದ್ದಾರೆ.

ರೂಪಾಯಿ ಮೌಲ್ಯದ ಏರಿಳಿತ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯದಲ್ಲಿ ಆಗುತ್ತಿರುವ ಏರಿಳಿತಗಳು ಆಮದು ವೆಚ್ಚವನ್ನು ಹೆಚ್ಚಿಸುತ್ತಿವೆ.

ಗ್ರಾಹಕರಿಗೆ ಸಣ್ಣ ಸಮಾಧಾನ: ಪ್ರಸ್ತುತ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದರೂ ಸಹ, ಈ ವರ್ಷದ ಆರಂಭದಲ್ಲಿ ದಾಖಲಾಗಿದ್ದ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ (All-Time High) ಹೋಲಿಸಿದರೆ ಚಿನ್ನದ ಬೆಲೆ ಇನ್ನು ಶೇ. 10 ರಷ್ಟು ಕಡಿಮೆ ದರದಲ್ಲೇ ಸಿಗುತ್ತಿರುವುದು ಸದ್ಯದ ಸಮಾಧಾನಕರ ಸಂಗತಿಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ