LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮಗೆ ನೀರಿನ ಕೊರತೆ ಇದ್ದರೂ ತಮಿಳುನಾಡಿಗೆ ಕದ್ದುಮುಚ್ಚಿ 2000 ಕ್ಯುಸೆಕ್ ಕಾವೇರಿ ನೀರು ಬಿಡುತ್ತಿದ್ದಾರೆ: ಆರ್.ಅಶೋಕ್ ಆರೋಪ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ ಮೇಲೂ ಕದ್ದುಮುಚ್ಚಿ ಕಾವೇರಿ ನೀರು ಬಿಡಲಾಗುತ್ತಿದೆ. ಅಂದಾಜು 2000 ಕ್ಯುಸೆಕ್ ನೀರು ಬಿಡ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್, ತಮಿಳುನಾಡಿನಲ್ಲಿ ಇರೋದು ಅವರ ಮೈತ್ರಿ ಸರ್ಕಾರ. ಮೈತ್ರಿ ಮೆಚ್ಚಿಸಲು ಕದ್ದು ಮುಚ್ಚಿ ನೀರು ಬಿಡುತ್ತಿದ್ದಾರೆ. ನಮ್ಮಲ್ಲಿ ನೀರು ಎಷ್ಟಿದೆ? ಯಾಕೆ ನಮಗೆ ಬಿಡಲು ಆಗುತ್ತಿಲ್ಲ ಎಂದು ರೈತರರಿಗೂ ಸರ್ಕಾರ ಮಾಹಿತಿ ಕೊಟ್ಟಿಲ್ಲ. ಸರ್ವ ಪಕ್ಷ ಸಭೆಯನ್ನೂ ಸರ್ಕಾರ ಕರೆದಿಲ್ಲ ಎಂದು ಕಿಡಿಕಾರಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಹಗರಣ ನಡೆದಿದೆ ಎಂದು ಸಿಎಜಿ ವರದಿ ಹೇಳಿದೆ. ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕು. 225 ಕೋಟಿ ರೂ. ಹಣವನ್ನು ನಕಲಿ ಖಾತೆಗಳಿಗೆ ಹಾಕಲಾಗಿದೆ. ನಕಲಿ ಖಾತೆಗಳು ರದ್ದಾದ ಮೇಲೂ ಅದೇ ಖಾತೆಗಳಿಗೆ ಹಣ ಹೋಗಿದೆ. ಇದು ಅಧಿಕಾರಿಗಳ ಕರ್ಮಕಾಂಡ. ಗ್ಯಾರಂಟಿ ಜಾರಿ ಸಮಿತಿ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ವಿಚಾರವಗಿ ಮಾತನಾಡಿದ ಆರ್.ಅಶೋಕ್, ಧರ್ಮಸ್ಥಳದ ವಿಚಾರ ಈಗ ಇಲ್ಲ. ಶಾಸಕರು ಅಲ್ಲಿಗೆ ಹೋಗುತ್ತಿಲ್ಲ. ಅಡ್ಡ ಮತ ಹಾಕಿದ ಶಾಸಕರು ಯಾರು ಅಂತ ಮುಂದೆ ಗೊತ್ತಾಗುತ್ತೆ. ಆ ವಿಚಾರದಲ್ಲಿ ಕ್ರಮ ಆಗಲಿದೆ. ಆದರೆ ಯಾರೂ ಧರ್ಮಸ್ಥಳಕ್ಕೆ ಹೋಗುತ್ತಿಲ್ಲ. ವಿಜಯೇಂದ್ರ ಧರ್ಮಸ್ಥಳ ಭೇಟಿ ಅವರ ವೈಯಕ್ತಿಕ ವಿಚಾರ ಎಂದರು.

ಅಡ್ಡ ಮತದಾನದಿಂದ ವಿಪಕ್ಷ ನಾಯಕ ಸ್ಥಾನ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗೆ, ಅದು ನಿಮ್ಮ ಭ್ರಮೆ ಅಷ್ಟೇ. ನಿಮ್ಮ ಭ್ರಮೆಗೆ ನಾನು ಉತ್ತರ ಕೊಡಲ್ಲ. ದೆಹಲಿಯಲ್ಲಿ ನಮಗಿಂತ ಹೆಚ್ಚು ಮಾಹಿತಿ ಪಡೆದಿದ್ದಾರೆ. ಈ ರೀತಿ ಮಾಡಿದವರಿಗೆ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ. ಸಮಯ ತೆಗೆದುಕೊಂಡು ಹೈಕಮಾಂಡ್‌ನವರು ಉತ್ತರ ಕೊಡ್ತಾರೆ. ಸದಾನಂದಗೌಡರಿಗೂ ಯಾವ ಶಾಸಕರು ಎಂದು ಕೇಳಿದೆ. ಅವರು ಹೆಸರು ಹೇಳಲಿಲ್ಲ ಎಂದು ಇದೇ ವೇಳೆ ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ರಾಜ್ಯದ ಬಸ್ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಸಿದ್ಧರಾಮಯ್ಯ5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದಿನಿಂದ ಜು.1 ರವರೆಗೆ ಪಲ್ಸ್ ಪೋಲಿಯೋ: 65 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿBREAKING: ರಾಜ್ಯದಲ್ಲಿ 13,675 ಅಕ್ರಮ ವಲಸಿಗರು ಪತ್ತೆ: ಜಿಲ್ಲಾವಾರು ಪಟ್ಟಿ ಸಿದ್ಧಪಡಿಸಿದ ಗೃಹ ಇಲಾಖೆ2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಆಯ್ಕೆ ಬೇಡ: ವಿವಾದ ಸೃಷ್ಟಿಸಲಿದೆಯೇ ಮಾಜಿ ಕ್ರಿಕೆಟಿಗನ ಹೇಳಿಕೆ?ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊ