LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಗಸ್ಟ್ 6 ಮತ್ತು 7ರಂದು ಖಾದಿ ಬಟ್ಟೆಗಳ ಮಾರಾಟ ಮಳಿಗೆ ಪ್ರಾರಂಭ

ಧಾರವಾಡ : ಧಾರವಾಡ ಜಿಲ್ಲೆ ಜಿಲ್ಲಾಧಿಕಾರಿಗಳವರ ನಿರ್ದೇಶನದ ಮೇರೆಗೆ ಖಾದಿ ಬಟ್ಟೆಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ತೆರೆಯಲು ಅವಕಾಶ ನೀಡಿದ್ದು, ಆಗಸ್ಟ್ 6 ಮತ್ತು 7, 2026 ರಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಖಾದಿ ಬಟ್ಟೆಗಳ ಮಾರಾಟ ಮಳಿಗೆಗಳನ್ನು ಪ್ರಾರಂಭಿಸಲಾಗಿದೆ.

ಈ ಮಾರಾಟ ಮಳಿಗೆಗಳು ಧಾರವಾಡ ಜಿಲ್ಲೆಯ ಅಧಿಕೃತ ಸಂಘ-ಸಂಸ್ಥೆಗಳಾದ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಫೆ), ಬೆಂಗೇರಿ-ಹುಬ್ಬಳ್ಳಿ ಹಾಗೂ ಧಾರವಾಡ ತಾಲೂಕು ಗರಗ ಕ್ಷೇತ್ರೀಯ ಸೇವಾ ಸಂಘ, ಗರಗ ವತಿಯಿಂದ ಎರಡು ದಿನಗಳ ಕಾಲ ವಿವಿಧ ಬಗೆಯ ಗುಣಮಟ್ಟದ ಹಾಗೂ ವೈವಿಧ್ಯಮಯ ಖಾದಿ ಬಟ್ಟೆಗಳನ್ನು ಮಾರಾಟ ಮಾಡಲಾಗುತ್ತದೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತಾತ್ಕಾಲಿಕ ಮಳಿಗೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಎಲ್ಲಾ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಖಾದಿ ಮಾರಾಟ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ

ಧಾರವಾಡ : ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಆಹಾರಧಾನ್ಯಗಳನ್ನು ಪೂರೈಸುತ್ತಿದ್ದು, ಅದರಂತೆ ಅಗಸ್ಟ-2026 ನೇ ಮಾಹೆಯಲ್ಲಿ ಅಗಸ್ಟ-2026 ಹಾಗೂ ಸಪ್ಟಂಬರ-2026 ನೇ ಈ ಎರಡು ಮಾಹೆಗಳಿಗೆ ಸಂಬಂಧಿಸಿದಂತೆ, ಜಿಲ್ಲೆಯ ಅಂತ್ಯೋದಯ ಪಡಿತರ ಚೀಟಿ (ಪ್ರತಿ ಕಾರ್ಡಿಗೆ) 28 ಕೆಜಿ ಅಕ್ಕಿ ಮತ್ತು 42 ಕೆಜಿ ಜೋಳ ಒಟ್ಟು 70 ಕೆಜಿ ಆಹಾರಧಾನ್ಯ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಕೇಂದ್ರ ವರ್ಗದಡಿಯ ಪಡಿತರ ಕಾರ್ಡುಗಳಿಗೆ 4 ಕೆಜಿ ಅಕ್ಕಿ ಮತ್ತು 6 ಕೆಜಿ ಜೋಳ ಒಟ್ಟು 10 ಕೆಜಿ ಆಹಾರಧಾನ್ಯ ಹಾಗೂ ರಾಜ್ಯ ಆದತ್ಯಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಪಡಿತರ ಆಹಾರಧಾನ್ಯವನ್ನು ವಿತರಣೆ ಮಾಡಲಾಗುತ್ತದೆ. ಹಾಗೆಯೇ ರಾಜ್ಯ ಸರ್ಕಾರವು ತನ್ನ ಪಾಲಿನ ಎರಡು ತಿಂಗಳ ಅಕ್ಕಿಯನ್ನು ಸಪ್ಟಂಬರ-2026 ನೇ ಮಾಹೆಯಲ್ಲಿ ನೀಡಲಾಗುವುದು.

ಪ್ರಸ್ತುತ ಅಗಸ್ಟ-2026 ನೇ ಮಾಹೆಯಲ್ಲಿ ಕೇಂದ್ರ ವ್ಯಾಪ್ತಿ ಅಂದರೆ ಎನ್‍ಎಫ್‍ಎಸ್‍ಎ ವರ್ಗದಡಿ ಅಗಸ್ಟ ಮತ್ತು ಸಪ್ಟಂಬರ-2026 ಎರಡೂ ಮಾಹೆಗಳ ಪಡಿತರ ಆಹಾರಧಾನ್ಯವನ್ನು ವಿತರಿಸಲಾಗುತ್ತಿದ್ದು, ಎಲ್ಲ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಎರಡೂ ಮಾಹೆಗಳಿಗೆ ಸಂಬಂಧಿಸಿದಂತೆ ಮಾಹೆವಾರು ಪ್ರತ್ಯೇಕವಾಗಿ ಬೆರಳಚ್ಚು ನೀಡಿ ಉಚಿತವಾಗಿ ಪಡಿತರವನ್ನು ಪಡೆಯಬೇಕು. ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ 1967 ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ