LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಪಟ್ಟಣ ಕ್ವಾರಿಯಲ್ಲಿ 7 ಕಾರ್ಮಿಕರ ದುರ್ಮರಣ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ನೀಡುವಂತೆ ಅಶೋಕ್ ಆಗ್ರಹ

ಬೆಂಗಳೂರು: ಮಾದಪಟ್ಟಣದ ಕ್ವಾರಿಯಲ್ಲಿ ಬಂಡೆ ಬಿದ್ದು ಏಳು ಕಾರ್ಮಿಕರು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಲ್ಲಿ ಗುರುತು ಸಿಗಲಾರದ ಮಟ್ಟಿಗೆ ದೇಹಗಳು ಛಿದ್ರಗೊಂಡಿವೆ. ನಾನು ವೈದ್ಯರನ್ನು ಭೇಟಿ ಮಾಡಿ ತಕ್ಷಣ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ. ರಾಜ್ಯದಲ್ಲಿ ಅನೇಕ ಕಡೆ ಕ್ವಾರಿ ದಂಧೆ ನಡೆಯುತ್ತಿದೆ. ರಾಜಕಾರಣಿಗಳ ಹೆಸರು ಹೇಳಿಕೊಂಡು ಲೈಸೆನ್ಸ್‌ ಇಲ್ಲದೆಯೇ ಅನಧಿಕೃತವಾಗಿ ಕ್ವಾರಿ ಗಣಿ ನಡೆಯುತ್ತಿದೆ. ಬೆಂಗಳೂರಿಗೆ 15 ಕಿ.ಮೀ. ದೂರದ ಕ್ವಾರಿಯಲ್ಲಿ ಪರಿಶೀಲನೆ ಮಾಡುವ ಯೋಗ್ಯತೆ ಇಲ್ಲದೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಜಕ್ಕೂ ಸತ್ತುಹೋಗಿದೆ ಎಂದು ದೂರಿದರು.

ಕೂಲಿಗಾಗಿ ಬೇರೆ ರಾಜ್ಯದಿಂದ ಬಂದ ಕಾರ್ಮಿಕರು ಮೃತಪಟ್ಟಿದ್ದಾರೆ. ಸರ್ಕಾರ ಅನಧಿಕೃತ ಕ್ವಾರಿ ಗಣಿಗಾರಿಕೆಗೆ ಅವಕಾಶ ನೀಡುವುದು ಸರಿಯಲ್ಲ. ಇದಕ್ಕೆ ಹಿಂದೆಯೂ ಇಂತಹ ಘಟನೆ ನಡೆದಿದ್ದರೂ ಕ್ರಮ ವಹಿಸಿಲ್ಲ. ವಿರೋಧಿಗಳಿದ್ದರೆ ಪೊಲೀಸರು ಹುಡುಕಿಕೊಂಡು ಹೋಗುತ್ತಿದ್ದರು. ಆದರೆ ಇಷ್ಟು ಸಮಯವಾದರೂ ಒಬ್ಬರನ್ನೂ ಬಂಧಿಸಿಲ್ಲ. ಜಿಲ್ಲಾಧಿಕಾರಿಗೆ ಕರೆ ಮಾಡಿದರೆ ಫೋನ್‌ ಕರೆ ಸ್ವೀಕರಿಸುತ್ತಿಲ್ಲ. ಸಚಿವರು ಕೂಡ ಈ ಕಡೆ ಬಂದಿಲ್ಲ. ನಾನು ಸ್ಥಳಕ್ಕೆ ಬಂದು ಕ್ರಮ ವಹಿಸಿ ಎಂದು ಹೇಳುವ ಸ್ಥಿತಿ ಬಂದಿದೆ. ಈ ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ದುರಂತ ನಡೆದಿದೆ ಎಂದರು.

ಈ ಘಟನೆಗೆ ಕಾರಣರಾದ ತಪ್ಪಿಸ್ಥರನ್ನು ಬಂಧಿಸಬೇಕು. ಕಾರ್ಮಿಕರ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು. ಗಾಯಾಳುಗಳು ಚೇತರಿಸಿಕೊಳ್ಳಲು ಬಹಳ ಕಾಲ ಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರಿಗೂ 10 ಲಕ್ಷ ರೂ. ಸಹಾಯ ನೀಡಬೇಕು ಎಂದು ಆಗ್ರಹಿಸಿದರು.

52 ಕ್ರಿಮಿನಲ್‌ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವ ಕುರಿತು ಪ್ರತಿಕ್ರಿಯಸಿದ ಅವರು, ಮುಸ್ಲಿಮರಿಗೆ ಒಂದು, ಹಿಂದೂಗಳಿಗೆ ಒಂದು ಎಂಬ ಕಾನೂನು ಮಾಡಬಾರದು. ಕಾಂಗ್ರೆಸ್‌ ಸರ್ಕಾರ ಮುಸ್ಲಿಂ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆದು, ದೇಶ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿದೆ. ಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಸರ್ಕಾರಕ್ಕೆ ಕಪಾಳ ಮೋಕ್ಷವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಮ ಹಾಕಿಕೊಂಡು ದೇವಾಲಯ ಸುತ್ತಿದರೆ ಹಿಂದೂ ಎಂದು ಯಾರೂ ನಂಬಲ್ಲ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ