LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನು ರಾಜ್ಯಾದ್ಯಂತ ಪ್ರತಿ ಶನಿವಾರ ಬೆಳಗ್ಗೆ 8:30 ರಿಂದ 12:30 ರವರೆಗೆ ಶಾಲಾ ಸಮಯ ನಿಗದಿ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಶನಿವಾರದ ತರಗತಿಗಳನ್ನು ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ವರೆಗೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಎಲ್ಲಾ ಶಾಲೆಗಳ ತರಗತಿಗಳ ಸಮಯದಲ್ಲಿ ಏಕರೂಪತೆ ತರುವ ಉದ್ದೇಶದಿಂದ ಶಿಕ್ಷಣ ಇಲಾಖೆ ನಿಯಮ ರೂಪಿಸಿ ಆದೇಶ ಹೊರಡಿಸಿದೆ. ಇದುವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಸಮಯದಲ್ಲಿ ಶನಿವಾರದ ತರಗತಿಗಳು ನಡೆಯುತ್ತಿದ್ದವು. ಕೆಲವು ಶಾಲೆಗಳು ಬೆಳಿಗ್ಗೆ 8ರಿಂದ 12 ಗಂಟೆಯವರೆಗೆ, ಇನ್ನು ಕೆಲವು ಕಡೆ ಬೆಳಗ್ಗೆ 7:30 ರಿಂದ 11:30ರ ವರೆಗೆ, ಮತ್ತೆ ಕೆಲವು ಕಡೆ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಾಲೆಗಳು ನಡೆಯುತ್ತಿದ್ದವು.ಹೀಗಾಗಿ ಒಂದೇ ಸಮಯ ಪಾಲನೆಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

ಬೆಳಗ್ಗೆ 7 ಗಂಟೆಗೆ ತರಗತಿಗಳನ್ನು ಆರಂಭಿಸುವುದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಸ್ಥಿತಿಗತಿ ಮೇಲೆ ಪ್ರಭಾವ ಬೀರುವ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶಿಕ್ಷಣ ಇಲಾಖೆಯ ಗಮನಕ್ಕೆ ತಂದಿತ್ತು. ಈ ವರ್ಷದಿಂದ ಜಾರಿಗೆ ತಂದಿರುವ ಆನ್ಲೈನ್ ಹಾಜರಾತಿ ನಿರ್ವಹಣೆ ಕೂಡ ಏಕರೂಪದ ಸಮಯ ನಿಗದಿಯಾದರೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳು ಒಂದೇ ರೀತಿಯ ಸಮಯ ಪಾಲಿಸಲು ಸೂಚಿಸಲಾಗಿದೆ.

ಶನಿವಾರದ ತರಗತಿಗಳನ್ನು ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ನಡೆಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ. ಶಿಕ್ಷಕರು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಪ್ರತಿ ಶನಿವಾರಕ್ಕೆ ಮಾತ್ರ ಶಾಲಾ ಸಮಯವನ್ನು ಏಕರೂಪವಾಗಿ ಬದಲಾವಣೆ ಮಾಡಲಾಗಿದ್ದು, ಕರ್ತವ್ಯ ಅಪ್ಲಿಕೇಶನ್ ನಲ್ಲಿ ಇದನ್ನು ಅಪ್ಡೇಟ್ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇತಿಹಾಸ ಸೃಷ್ಟಿಸಿದ ಐರ್ಲೆಂಡ್: ಭಾರತಕ್ಕೆ ಟಿ20 ಸರಣಿ ಸೋಲಿನ ಶಾಕ್BREAKING: ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆರಾಜ್ಯದಲ್ಲಿ ಜು. 2 ರವರೆಗೆ ಮಳೆ ಮುನ್ಸೂಚನೆ: ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್ರಾಜ್ಯದಲ್ಲಿ ನಾಳೆಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ವಿಪಕ್ಷದವರ ಹತಾಶೆಯ ಪರಮಾವಧಿ: ಸಿಎಂ ಡಿ.ಕೆ. ಶಿವಕುಮಾರ್BREAKING: ರಾಸ್ ತನುರಾ ಬಳಿ ಸೌದಿ ಅರೇಬಿಯಾದ ಇಂಧನ ದೈತ್ಯ ‘ಸೌದಿ ಅರಾಮ್ಕೊ’ ಹೆಲಿಕಾಪ್ಟರ್ ಪತನ: 14 ಮಂದಿ ಸಾವುBREAKING NEWS: ಫ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ: 11 ಜನ ಸಾವು‘ಮಿಷನ್ ಇಂದ್ರಧನುಷ್’ ಯೋಜನೆಯಡಿ 7 ಪ್ರಮುಖ ರೋಗಗಳ ವಿರುದ್ಧದ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ಹಾಕಿಸಿನನ್ನ ಹೋರಾಟ ಡಿ.ಕೆ.ಶಿವಕುಮಾರ್​ ವಿರುದ್ಧ ಅಲ್ಲ; ರೈತರ ನಡುವೆ ಬಂದು ಚರ್ಚೆ ಮಾಡುವುದಕ್ಕೆ ನಾನು ಈಗಲೂ ಸಿದ್ಧ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ