LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ರೈಲ್ವೇ ಪ್ರಯಾಣಿಕರೇ ಎಚ್ಚರ ; ಇನ್ಮುಂದೆ ಈ ತಪ್ಪು ಮಾಡಿದರೆ ₹5,000 ವರೆಗೆ ದಂಡ, ಜು. 1ರಿಂದ ಹೊಸ ರೂಲ್ಸ್

ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಶಾಕ್ ನೀಡಿದ್ದು, ಟಿಕೆಟ್ ಇಲ್ಲದೆ ಪ್ರಯಾಣಿಸುವವರು, ಇತರರ ಟಿಕೆಟ್ ಬಳಸಿ ಸಂಚರಿಸುವವರು ಹಾಗೂ ರೈಲು-ನಿಲ್ದಾಣಗಳಲ್ಲಿ ಅನಧಿಕೃತ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಜುಲೈ 1ರಿಂದ ಜಾರಿಗೆ ಬರುವ ಹೊಸ ನಿಯಮಗಳ ಪ್ರಕಾರ, ದಂಡದ ಮೊತ್ತವನ್ನು ಹೆಚ್ಚಿಸಲಾಗಿದ್ದು, ಕೆಲವು ಉಲ್ಲಂಘನೆಗಳಿಗೆ ₹5,000 ವರೆಗೆ ದಂಡ ಹಾಗೂ ಜೈಲು ಶಿಕ್ಷೆಯೂ ಎದುರಾಗಬಹುದು.

ಭಾರತೀಯ ರೈಲ್ವೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಟಿಕೆಟ್ ಇಲ್ಲದೆ ಪ್ರಯಾಣಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ರೈಲ್ವೆ ನಿಯಮ ಉಲ್ಲಂಘನೆ ಮಾಡುವವರ ಮೇಲೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ಹೆಚ್ಚಿಸಲಾಗಿದ್ದು, ಹೊಸ ನಿಯಮಗಳು ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿವೆ.

ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ₹500 ದಂಡ

ಇಲ್ಲಿಯವರೆಗೆ ಟಿಕೆಟ್ ಇಲ್ಲದೆ ಪ್ರಯಾಣಿಸುವ ವೇಳೆ ಸಿಕ್ಕಿಬಿದ್ದವರಿಗೆ ಕನಿಷ್ಠ ₹250 ದಂಡ ವಿಧಿಸಲಾಗುತ್ತಿತ್ತು. ಇದೀಗ ಅದನ್ನು ₹500ಕ್ಕೆ ಹೆಚ್ಚಿಸಲಾಗಿದೆ. ಹೀಗಾಗಿ ಟಿಕೆಟ್ ಇಲ್ಲದೆ ರೈಲು ಪ್ರಯಾಣ ಮಾಡುವವರಿಗೆ ಭಾರೀ ಹೊರೆ ಬೀಳಲಿದೆ.ಇದಲ್ಲದೆ, ಇತರರ ಹೆಸರಿನ ಟಿಕೆಟ್ ಬಳಸಿಕೊಂಡು ಪ್ರಯಾಣಿಸುವವರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂತಹ ಪ್ರಯಾಣಿಕರು ಪೂರ್ಣ ಪ್ರಯಾಣ ದರದ ಜೊತೆಗೆ ಕನಿಷ್ಠ ₹500 ದಂಡವನ್ನು ಪಾವತಿಸಬೇಕಾಗುತ್ತದೆ. ದಂಡ ಪಾವತಿಸದಿದ್ದರೆ ಪ್ರಕರಣವನ್ನು ನ್ಯಾಯಾಲಯಕ್ಕೆ ಕಳುಹಿಸಬಹುದು.

ಅನಧಿಕೃತ ವ್ಯಾಪಾರ, ಭಿಕ್ಷಾಟನೆಗೂ ಕಠಿಣ ಕ್ರಮ

ರೈಲುಗಳಲ್ಲಿ ಅಥವಾ ರೈಲು ನಿಲ್ದಾಣಗಳಲ್ಲಿ ಅನುಮತಿ ಇಲ್ಲದೆ ವಸ್ತುಗಳ ಮಾರಾಟ, ಬೀದಿ ವ್ಯಾಪಾರ ಅಥವಾ ಪ್ರಯಾಣಿಕರನ್ನು ಖರೀದಿಗೆ ಒತ್ತಾಯಿಸುವಂತಹ ಚಟುವಟಿಕೆಗಳಿಗೆ ₹2,000 ವರೆಗೆ ದಂಡ ವಿಧಿಸಲಾಗುತ್ತದೆ.ದಂಡ ಪಾವತಿಸದಿದ್ದರೆ ಪ್ರಕರಣ ನ್ಯಾಯಾಲಯಕ್ಕೆ ಹೋಗಬಹುದು. ನ್ಯಾಯಾಲಯವು ಮೂರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ₹5,000 ವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದು. ಅದೇ ತಪ್ಪನ್ನು ಪದೇ ಪದೇ ಮಾಡುವವರಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆಯೂ ವಿಧಿಸಬಹುದು.

ಮದ್ಯಪಾನ ಮಾಡಿ ಗಲಾಟೆ ಮಾಡಿದರೆ ಕಠಿಣ ಕ್ರಮ

ರೈಲು ಅಥವಾ ರೈಲ್ವೆ ಆವರಣದಲ್ಲಿ ಮದ್ಯಪಾನ ಮಾಡಿ ಇತರ ಪ್ರಯಾಣಿಕರಿಗೆ ತೊಂದರೆ ನೀಡುವವರು, ನಿಂದನೆ ಮಾಡುವವರು ಅಥವಾ ಗಲಾಟೆ ಸೃಷ್ಟಿಸುವವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುತ್ತದೆ.ಅಂತಹ ವ್ಯಕ್ತಿಗಳನ್ನು ರೈಲಿನಿಂದ ಕೆಳಗಿಳಿಸಿ ದಂಡ ವಿಧಿಸುವುದರ ಜೊತೆಗೆ, ಅಗತ್ಯವಿದ್ದರೆ ಕಾನೂನು ಕ್ರಮಗಳನ್ನೂ ಕೈಗೊಳ್ಳಬಹುದು.

ಎಲ್ಲಾ ರೈಲ್ವೆ ವಲಯಗಳಿಗೆ ಆದೇಶ

ಈ ಹೊಸ ನಿಯಮಗಳ ಬಗ್ಗೆ ಎಲ್ಲಾ ರೈಲ್ವೆ ವಲಯಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ ನೀಡುವಂತೆ ರೈಲ್ವೆ ಸಚಿವಾಲಯ ಜೂನ್ 18ರಂದು ಆದೇಶ ಹೊರಡಿಸಿದೆ. ಜುಲೈ 1ರಿಂದ ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರೈಲ್ವೆ ಮಂಡಳಿ ಸೂಚಿಸಿದೆ.ರೈಲ್ವೆ ಸಚಿವಾಲಯದ ಪ್ರಕಾರ, ಟಿಕೆಟ್ ಇಲ್ಲದ ಪ್ರಯಾಣ, ಟಿಕೆಟ್ ದುರುಪಯೋಗ ಹಾಗೂ ಇತರೆ ನಿಯಮ ಉಲ್ಲಂಘನೆಗಳನ್ನು ತಡೆಯುವ ಉದ್ದೇಶದಿಂದ ಈ ಬದಲಾವಣೆಗಳನ್ನು ತರಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ