LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಅಯೋಧ್ಯೆ ರಾಮಮಂದಿರದಲ್ಲಿ 70 ಬಾರಿ ಹುಂಡಿ ಕಳ್ಳತನ ! ₹7.5 ಕೋಟಿ ಎಗರಿಸಿದ್ದ ಗ್ಯಾಂಗ್‌ನ ಕರಾಳ ಕೃತ್ಯ ಬಯಲು

ಅಯೋಧ್ಯೆ: ದೇಶದ ಕೋಟ್ಯಂತರ ಹಿಂದೂಗಳ ಭಕ್ತಿಯ ಕೇಂದ್ರವಾಗಿರುವ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬೆಚ್ಚಿಬೀಳಿಸುವ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಹಲವು ತಿಂಗಳುಗಳಿಂದ ಸಂಘಟಿತ ತಂಡವೊಂದು ( ಹಣ ಎಣಿಸುವ ಗ್ಯಾಂಗ್)‌ ರಾಮಮಂದಿರದ ಹುಂಡಿಯಿಂದ ಹಣ ಕಳವು ಮಾಡುತ್ತಿದ್ದು, ಸುಮಾರು ₹7.5 ಕೋಟಿ ಎಗರಿಸಿರುವ ಆರೋಪ ಕೇಳಿಬಂದಿದೆ.

ಪ್ರಕರಣದ ತನಿಖೆ ವೇಳೆ ಆರೋಪಿಗಳು ಅತ್ಯಂತ ವ್ಯವಸ್ಥಿತವಾಗಿ ಕಳ್ಳತನ ನಡೆಸಿರುವುದು ಬಹಿರಂಗವಾಗಿದೆ. ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು ಚಾಣಾಕ್ಷತನದಿಂದ ಬಳಸಿಕೊಂಡು, ಸಿಸಿಟಿವಿ ಕ್ಯಾಮೆರಾಗಳ ಕಣ್ತಪ್ಪಿಸಿ ಹಲವು ಬಾರಿ ಹಣ ಕಳವು ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ವರದಿಗಳ ಪ್ರಕಾರ, ಸುಮಾರು 70 ಬಾರಿ ಹುಂಡಿ ಹಣವನ್ನು ಕಳವು ಮಾಡಲಾಗಿದೆ ಎನ್ನಲಾಗಿದೆ.

ಕಳ್ಳತನ ನಡೆಸಿದ್ದು ಹೇಗೆ?

ತನಿಖೆಯ ಮಾಹಿತಿ ಪ್ರಕಾರ, ಹುಂಡಿ ತೆರೆಯುವ ವೇಳೆ ಒಬ್ಬ ಆರೋಪಿ ಸಿಸಿಟಿವಿ ಕ್ಯಾಮೆರಾಗೆ ಅಡ್ಡವಾಗಿ ನಿಂತು ದೃಶ್ಯಗಳು ದಾಖಲಾಗದಂತೆ ಮಾಡುತ್ತಿದ್ದ. ಇದೇ ವೇಳೆ ಮತ್ತೊಬ್ಬ ಆರೋಪಿ ಎಣಿಕೆಗೆ ತೆಗೆದಿದ್ದ ಹಣವನ್ನು ಕದ್ದುಕೊಳ್ಳುತ್ತಿದ್ದ.

ಇದಲ್ಲದೆ, ಹಣದ ಕಂತುಗಳಲ್ಲಿ ಹೆಚ್ಚುವರಿ ನೋಟುಗಳನ್ನು ಸೇರಿಸಿ ಲೆಕ್ಕದಲ್ಲಿ ವ್ಯತ್ಯಾಸ ಉಂಟುಮಾಡಿ, ಉಳಿದ ಹಣವನ್ನು ಕಳವು ಮಾಡಲಾಗುತ್ತಿತ್ತು. ಕದ್ದ ಹಣವನ್ನು ದೇವಾಲಯದ ಶೌಚಾಲಯದಲ್ಲಿ ಅಡಗಿಸಿಟ್ಟು ನಂತರ ತಂಡದ ಸದಸ್ಯರು ಹಂಚಿಕೊಳ್ಳುತ್ತಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಬಂಧಿತ ೮ ಮಂದಿ ಆರೋಪಿಗಳ ಪೈಕಿ ಓರ್ವ ಕದ್ದ ಹಣವನ್ನು ಸಗಣಿ ಕೆಳಗೆ ಬಚ್ಚಿಡುತ್ತಿದ್ದ. ಅಲ್ಲದೇ ಮತ್ತೋರ್ವ ಆರೋಪಿ ಕದ್ದ ಹಣವನ್ನು ಶೌಚಾಲಯದ ಮೂಲಕ ಸಾಗಿಸುತ್ತಿದ್ದನು.

8 ಆರೋಪಿಗಳ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 29ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಕೆಲವರ ಪಾತ್ರವಿದೆಯೇ ಎಂಬ ಕುರಿತು ಪರಿಶೀಲನೆ ನಡೆಯುತ್ತಿದೆ.

ಟ್ರಸ್ಟ್‌ನಲ್ಲಿ ರಾಜೀನಾಮೆ

ಈ ಪ್ರಕರಣದ ನೈತಿಕ ಹೊಣೆ ಹೊತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿದಂತೆ ಇಬ್ಬರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಮಮಂದಿರದ ಭದ್ರತಾ ವ್ಯವಸ್ಥೆ ಮತ್ತು ಹಣದ ನಿರ್ವಹಣೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ