LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆ ; CM ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು :   ಕೇರಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿ.ಡಿ. ಸತೀಶನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಕೇರಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿ.ಡಿ. ಸತೀಶನ್ ಅವರಿಗೆ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಲಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಎನ್‌ಎಸ್‌ಯು‌ಐ ಮೂಲಕ ರಾಜಕೀಯ ಪ್ರವೇಶಿಸಿ, ಕಳೆದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸತೀಶನ್ ಅವರು ಅಪಾರ ಅನುಭವ ಹೊಂದಿದ್ದಾರೆ. 2021 ರಿಂದ 2026ರ ವರೆಗೆ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ ಇವರ ಸಂಘಟನಾಶೀಲತೆ ಮತ್ತು ಜನಸಾಮಾನ್ಯರೊಂದಿಗಿನ ಒಡನಾಟವು ಇಂದು ಅವರನ್ನು ಉನ್ನತ ಸ್ಥಾನಕ್ಕೆ ತಲುಪಿಸಿದೆ. ಅವರ ನಾಯಕತ್ವದಲ್ಲಿ ಕೇರಳದಲ್ಲಿ ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳೊಂದಿಗೆ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಆಡಳಿತವು ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಮತ್ತು ರಾಷ್ಟ್ರದ ಹಿತಕ್ಕಾಗಿ ಜೊತೆಗೂಡಿ ಕೆಲಸ ಮಾಡುವ ಆಶಯ ವ್ಯಕ್ತವಾಗಿದೆ ಎಂದಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ”ಕೇರಳಂ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ಹಾಗೂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿ.ಡಿ.ಸತೀಶನ್ ಅವರಿಗೆ ಅಭಿನಂದನೆಗಳು. ವಿದ್ಯಾರ್ಥಿಯಾಗಿರುವಾಗಲೇ ಎನ್‌ಎಸ್‌ಯು‌ಐ ಮೂಲಕ ರಾಜಕೀಯ ರಂಗ ಪ್ರವೇಶಿಸಿ, ಬಳಿಕ 6 ಬಾರಿ ಶಾಸಕರಾಗಿ, 2021 ರಿಂದ 2026ರ ವರೆಗೆ ವಿರೋಧ ಪಕ್ಷದ ನಾಯಕರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದ ಸತೀಶನ್ ಅವರ ರಾಜಕೀಯ ಅನುಭವ, ಸಂಘಟನಾಶೀಲತೆ, ಜನಸಾಮಾನ್ಯರ ಜೊತೆಗಿನ‌ ಒಡನಾಟವು ಅವರನ್ನು ಇಲ್ಲಿಯವರೆಗೆ ಕೈಹಿಡಿದು ನಡೆಸಿದೆ ಎಂದು ಭಾವಿಸಿದ್ದೇನೆ. ಸತೀಶನ್ ಅವರ ನಾಯಕತ್ವದಲ್ಲಿ ಕೇರಳಂನಲ್ಲಿ ನಮ್ಮ ಪಕ್ಷವು ಜಾತ್ಯತೀತ, ಸಾಮಾಜಿಕ ನ್ಯಾಯದ ಆಶಯಗಳಡಿ ಸರ್ವರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಆಡಳಿತ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ. ಒಕ್ಕೂಟ ತತ್ವದಡಿ ಎರಡೂ ರಾಜ್ಯಗಳ ಮತ್ತು ರಾಷ್ಟ್ರದ ಹಿತಕ್ಕಾಗಿ ಜೊತೆಸೇರಿ ಕೆಲಸ ಮಾಡೋಣ. ಕೇರಳಂನ ಜನತೆಗೆ ಹಾಗೂ ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ