ಚೆನ್ನೈ: ಅಮೋನಿಯಂ ಅನಿಲ ಸೋರಿಕೆಯಾಗಿ ಭಾರಿ ದುರಂತ ಸಂಭವಿಸಿದೆ. ಇಬ್ಬರು ಕಾರ್ಮಿಕರಿ ಮ್ರಿತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಳ್ಳುರು ಜಿಲ್ಲೆಯಲ್ಲಿ ನಡೆದಿದೆ.
ತಿರುವಳ್ಳೂರಿನ ಕನ್ನಿಗೈಪರ್ ಗ್ರಾಮದಲ್ಲಿ ಸೀಫುಡ್ ಎಕ್ಸ್ ಪೋರ್ಟ್ ಯುನಿಟ್ ವೊಂದಲ್ಲಿ ಈ ದುರಂತ ಸಂಭವಿಸಿದೆ. ಅಮೋನಿಯಂ ಗ್ಯಾಸ್ ಸೋರಿಕೆಯಾದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 60ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾಗಿದ್ದು, ಅವರಲ್ಲಿ 4 ಜನರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರಾದವರನ್ನು ತಿರುವಳ್ಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಕಾರ್ಖಾನೆಯಲ್ಲಿ ಭಾರಿ ಪ್ರಮಾಣದಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿದೆ ಎನ್ನಲಾಗಿದೆ. ದುರಂತದ ಬಗ್ಗೆ ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಆಘಾತ ತಂದಿದೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ.