LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕರ್ನಾಟಕ ವಿಧಾನಪರಿಷತ್ ಚುನಾವಣೆ ; ಇದುವರೆಗೆ 95.5 ರಷ್ಟು ಮತದಾನ

ಬೆಂಗಳೂರು: ಬೆಂಗಳೂರು: ಕರ್ನಾಟಕ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಮತದಾನ ಚುರುಕುಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಸುಮಾರು 95.5 ಪ್ರತಿಶತ ಮತದಾನ ದಾಖಲಾಗಿದೆ. ವಿಧಾನಸಭೆಯ ಸದಸ್ಯರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದು, ಬಹುತೇಕ ಶಾಸಕರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

ಈ ಬಾರಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಏಳನೇ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಆಡಳಿತಾರೂಢ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿದ್ದರೆ, ಬಿಜೆಪಿ ಎರಡು ಸ್ಥಾನಗಳ ಮೇಲೆ ಭರವಸೆ ಇಟ್ಟಿದೆ. ಉಳಿದ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ ಎಣಿಕೆ ನಡೆಯಲಿದ್ದು, ಫಲಿತಾಂಶಗಳು ಇಂದು ಸಂಜೆ ಪ್ರಕಟವಾಗುವ ಸಾಧ್ಯತೆಯಿದೆ. ಏಳನೇ ಸ್ಥಾನ ಯಾರ ಪಾಲಾಗಲಿದೆ ಎಂಬುದರ ಮೇಲೆ ರಾಜ್ಯ ರಾಜಕೀಯ ವಲಯದ ಚಿತ್ತ ನೆಟ್ಟಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಭಾರೀ ಸಂಚಲನ ಮೂಡಿಸಿದ್ದು, ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ನಡೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವಿ ಮೇರೆಗೆ ಕಾಂಗ್ರೆಸ್ ಪರವಾಗಿ ಆತ್ಮಸಾಕ್ಷಿ ಮತ ಚಲಾಯಿಸಿದ್ದೇನೆ ಎಂದು ಎಸ್.ಟಿ. ಸೋಮಶೇಖರ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇದೇ ವೇಳೆ ಶಿವರಾಮ್ ಹೆಬ್ಬಾರ್ ಕೂಡ ಆತ್ಮಸಾಕ್ಷಿಯಂತೆ ಮತದಾನ ಮಾಡಿರುವುದಾಗಿ ಹೇಳಿಕೆ ನೀಡಿದ್ದು, ಮೈತ್ರಿಕೂಟದ ಲೆಕ್ಕಾಚಾರದಲ್ಲಿ ಬದಲಾವಣೆ ಉಂಟುಮಾಡಿದೆ.

ಇದರ ನಡುವೆ ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರ ಮತದಾನವೂ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ್ದರೂ, ಜಿ.ಟಿ. ದೇವೇಗೌಡ ಮಾತ್ರ ರೆಸಾರ್ಟ್‌ಗೆ ತೆರಳದೆ ದೂರ ಉಳಿದಿದ್ದರು. ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಪ್ರತ್ಯೇಕವಾಗಿ ಮತ ಚಲಾಯಿಸಿ ತೆರಳಿದ್ದು, ಅವರ ಮತ ಯಾರಿಗೆ ಬಿದ್ದಿದೆ ಎಂಬ ಚರ್ಚೆಗೆ ವೇದಿಕೆ ಕಲ್ಪಿಸಿದೆ.

ಆದರೆ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಜಿ.ಟಿ. ದೇವೇಗೌಡರ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಜಿ.ಟಿ. ದೇವೇಗೌಡರು ನನ್ನ ಪರವಾಗಿಯೇ ಮತ ಚಲಾಯಿಸಿದ್ದಾರೆ. ತಾಯಿ ಚಾಮುಂಡೇಶ್ವರಿ ಅವರನ್ನೇ ಇಲ್ಲಿಗೆ ಕಳುಹಿಸಿದ್ದಾರೆ. ಅವರ ಮೊದಲ ಪ್ರಾಶಸ್ತ್ಯದ ಮತ ನಮಗೇ ಸಿಕ್ಕಿದೆ ಎಂಬ ನಂಬಿಕೆ ಇದೆ” ಎಂದು ಹೇಳಿದ್ದಾರೆ.ಇದೇ ವೇಳೆ ಕಾಂಗ್ರೆಸ್ ಪಕ್ಷದ ಏಕಪಕ್ಷೀಯ ಧೋರಣೆಯಿಂದಲೇ ಇಂತಹ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಗೋವಿಂದರಾಜು ಟೀಕಿಸಿದ್ದಾರೆ. “ನಾವೆಲ್ಲರೂ ಒಂದು ಕುಟುಂಬದಂತೆ ಒಗ್ಗಟ್ಟಾಗಿದ್ದೇವೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಆದರೆ ಕಾಂಗ್ರೆಸ್‌ನ ರಾಜಕೀಯ ತಂತ್ರಗಳಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದ್ದಾರೆ.

ಸೋಮಶೇಖರ್ ಹಾಗೂ ಹೆಬ್ಬಾರ್ ಅವರ ಅಡ್ಡಮತದಾನದಿಂದ ಕಾಂಗ್ರೆಸ್ ಪಾಳಯದಲ್ಲಿ ಗೆಲುವಿನ ವಿಶ್ವಾಸ ಹೆಚ್ಚಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮುಖಭಂಗವಾಗುವ ಸಾಧ್ಯತೆಗಳು ದಟ್ಟವಾಗಿವೆ. ಏಳನೇ ಸ್ಥಾನಕ್ಕಾಗಿ ನಡೆಯುತ್ತಿರುವ ಕಾದಾಟದ ಫಲಿತಾಂಶದತ್ತ ಇದೀಗ ರಾಜ್ಯ ರಾಜಕೀಯ ವಲಯದ ಚಿತ್ತ ನೆಟ್ಟಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ