LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕಲಬುರಗಿ ನಗರದಲ್ಲಿ ತಡರಾತ್ರಿ ಲಘು ಭೂಕಂಪ ; ಹೆದರಿ ಮನೆಯಿಂದ ಹೊರಗೆ ಓಡಿಬಂದ ಜನ |Earthquake

ಕಲಬುರಗಿ: ನಗರದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದ್ದು, ಹಲವು ಪ್ರದೇಶಗಳ ನಿವಾಸಿಗಳು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದ ಘಟನೆ ನಡೆದಿದೆ.

ಕಲಬುರಗಿ ನಗರದಲ್ಲಿ ಬುಧವಾರ ತಡರಾತ್ರಿ ಸುಮಾರು 1.30 ಗಂಟೆ ವೇಳೆಗೆ ಲಘು ಭೂಕಂಪನದ ಅನುಭವವಾಗಿದ್ದು, ಹರಿಕೃಷ್ಣ ನಗರ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ಆತಂಕಗೊಂಡು ಮನೆಗಳಿಂದ ಹೊರಗೆ ಓಡಿಬಂದರು.ಬುಧವಾರ ತಡರಾತ್ರಿ ಸುಮಾರು 1.30 ಗಂಟೆ ವೇಳೆಗೆ ಹರಿಕೃಷ್ಭ ನಗರ, ಮಹಾವೀರ ನಗರ ಸೇರಿದಂತೆ ಹಲವು ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕೆಲ ಕ್ಷಣಗಳ ಕಾಲ ಕಂಪಿಸಿದ ಅನುಭವ ಸ್ಥಳೀಯರಿಗೆ ಆಗಿದೆ. ಮನೆಗಳಲ್ಲಿದ್ದ ಜನರು ಏಕಾಏಕಿ ಕಂಪನವನ್ನು ಅನುಭವಿಸಿ ಆತಂಕಗೊಂಡು ಸುರಕ್ಷತೆಗಾಗಿ ಹೊರಗೆ ಬಂದರು.

ಹರಿಕೃಷ್ಭ ನಗರ, ಮಹಾವೀರ ನಗರ ಸೇರಿದಂತೆ ಸುತ್ತಮುತ್ತಲಿನ ಕೆಲವು ಬಡಾವಣೆಗಳ ನಿವಾಸಿಗಳು 4 ರಿಂದ 5 ಸೆಕೆಂಡ್ ಭೂಕಂಪನದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹಂಚಿಕೊಂಡಿದ್ದಾರೆ. ಕೆಲವರು ಮನೆಯಲ್ಲಿ ವಸ್ತುಗಳು ಸ್ವಲ್ಪ ಅಲ್ಲಾಡಿದ ಅನುಭವವಾಗಿದೆ ಎಂದು ತಿಳಿಸಿದ್ದಾರೆ.ಸದ್ಯಕ್ಕೆ ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿರುವ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಭೂಕಂಪನದ ತೀವ್ರತೆ ಹಾಗೂ ಕೇಂದ್ರಬಿಂದುವಿನ ಬಗ್ಗೆ ಸಂಬಂಧಿತ ಇಲಾಖೆಗಳಿಂದ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಭೂಕಂಪನದ ಅನುಭವದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ