LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕರ್ನಾಟಕ ಬಂದ್’ಗೆ ನೀರಸ ಪ್ರತಿಕ್ರಿಯೆ ; ರಾಜ್ಯಾದ್ಯಂತ ಜನಜೀವನ ಸಹಜ |Karnataka Bandh

ಬೆಂಗಳೂರು: ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್’ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಬಿಸಿ ಸಾರ್ವಜನಿಕ ಸಾರಿಗೆ ಹಾಗೂ ಜನಜೀವನಕ್ಕೆ ಹೆಚ್ಚಿನ ಮಟ್ಟದಲ್ಲಿ ತಟ್ಟಿಲ್ಲ. KSRTC ಮತ್ತು BMTC ಬಸ್’ಗಳು ಎಂದಿನಂತೆ ಸಂಚರಿಸುತ್ತಿದ್ದು, ಆಟೋ, ಕ್ಯಾಬ್ ಹಾಗೂ ಓಲಾ ಸೇವೆಗಳೂ ಸಹ ಎಂದಿನಂತೆ ಲಭ್ಯವಿವೆ.

ಹೌದು. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್ನ ಪರಿಣಾಮ ಜನಜೀವನದ ಮೇಲೆ ಹೆಚ್ಚಿನ ಮಟ್ಟಿಗೆ ಬೀರಿಲ್ಲ. ರಾಜ್ಯಾದ್ಯಂತ KSRTC, BMTC ಬಸ್’ಗಳು, ಆಟೋ, ಕ್ಯಾಬ್ ಹಾಗೂ ಓಲಾ ಸೇವೆಗಳು ಎಂದಿನಂತೆ ಮುಂದುವರಿದಿವೆ. ಹಲವು ಜಿಲ್ಲೆಗಳಲ್ಲಿ ಕನ್ನಡ ಪರ ಸಂಘಟನೆಗಳು ರ್ಯಾಲಿ ಹಾಗೂ ಪ್ರತಿಭಟನೆ ನಡೆಸಿದರೆ, ಶಾಲಾ-ಕಾಲೇಜುಗಳು, ಮಾರುಕಟ್ಟೆ ಸೇರಿದಂತೆ ಬಹುತೇಕ ಚಟುವಟಿಕೆಗಳು ಯಥಾಸ್ಥಿತಿಯಲ್ಲಿವೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ರ್ಯಾಲಿ ಹಾಗೂ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವೆಡೆ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡಲಾಗಿದ್ದರೂ, ಒಟ್ಟಾರೆ ಬಂದ್ ಪ್ರತಿಭಟನೆ ಮತ್ತು ರ್ಯಾಲಿಗಳಿಗೆ ಮಾತ್ರ ಸೀಮಿತವಾಗಿದೆ.

ಫ್ರೀಡಂಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ

ಪ್ರತಿಭಟನೆ ನಡೆಸಲು ಫ್ರೀಡಂ ಪಾರ್ಕ್’ಗೆ ಮಾತ್ರ ಅವಕಾಶ ನೀಡಲಾಗಿದೆ. ಟೌನ್ಹಾಲ್ ಸೇರಿದಂತೆ ನಗರದ ಇತರೆ ಭಾಗಗಳಿಂದ ರ್ಯಾಲಿ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ನಿಯಮ ಉಲ್ಲಂಘಿಸಿ ರ್ಯಾಲಿ ನಡೆಸಲು ಯತ್ನಿಸಿದರೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ಸಾರಿಗೆಗೆ ಅಡ್ಡಿಪಡಿಸುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರು ಮತ್ತು ವ್ಯಾಪಾರಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮೆಜೆಸ್ಟಿಕ್, ಶಾಂತಿನಗರದಲ್ಲಿ ಬಸ್ ಸಂಚಾರ ಸಹಜ
ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ಬಸ್ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಆದರೆ ಪರಿಸ್ಥಿತಿ ಸಹಜವಾಗಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಮತ್ತು ಶಾಂತಿನಗರ ಬಸ್ ನಿಲ್ದಾಣಗಳಲ್ಲಿ BMTC ಹಾಗೂ KSRTC ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ. ಪ್ರಯಾಣಿಕರ ಓಡಾಟಕ್ಕೂ ಯಾವುದೇ ದೊಡ್ಡ ವ್ಯತ್ಯಯವಾಗಿಲ್ಲ.

ಎಂದಿನಂತೆ ಬಸ್ ಸಂಚಾರ
ಕರ್ನಾಟಕದಾದ್ಯಂತ KSRTC ಬಸ್ಗಳ ಸಂಚಾರದಲ್ಲಿ ಯಾವುದೇ ಪ್ರಮುಖ ವ್ಯತ್ಯಯ ಕಂಡುಬಂದಿಲ್ಲ. ಬೆಂಗಳೂರಿನಲ್ಲಿಯೂ BMTC ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ. ಇದರಿಂದ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆ ಎದುರಾಗಿಲ್ಲ.

ಆಟೋ, ಕ್ಯಾಬ್ ಸೇವೆಗೂ ಅಡ್ಡಿಯಿಲ್ಲ
ಆಟೋ ರಿಕ್ಷಾ, ಕ್ಯಾಬ್ ಸೇರಿದಂತೆ ಓಲಾ ಸೇವೆಗಳು ಕೂಡ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಉದ್ಯೋಗ, ವ್ಯಾಪಾರ ಹಾಗೂ ಇತರೆ ಕೆಲಸಗಳಿಗೆ ತೆರಳುವವರಿಗೆ ಸಾರಿಗೆ ಸಮಸ್ಯೆ ಎದುರಾಗಿಲ್ಲ.

ಶಾಲಾ-ಕಾಲೇಜುಗಳು ಓಪನ್
ರಾಜ್ಯದ ಬಹುತೇಕ ಕಡೆ ಶಾಲಾ-ಕಾಲೇಜುಗಳು ಎಂದಿನಂತೆ ತೆರೆದಿವೆ. ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳ ಮೇಲೂ ಬಂದ್ನಿಂದ ಯಾವುದೇ ದೊಡ್ಡ ಪರಿಣಾಮ ಕಂಡುಬಂದಿಲ್ಲ.

ಮಾರುಕಟ್ಟೆ ವಹಿವಾಟು ಯಥಾಸ್ಥಿತಿ
ರಾಜ್ಯದ ಹಲವು ಪ್ರಮುಖ ಮಾರುಕಟ್ಟೆಗಳು ಹಾಗೂ ವಾಣಿಜ್ಯ ಪ್ರದೇಶಗಳಲ್ಲಿ ವಹಿವಾಟು ಎಂದಿನಂತೆ ಮುಂದುವರಿದಿದೆ. ಜನಜೀವನ ಬಹುತೇಕ ಸಹಜ ಸ್ಥಿತಿಯಲ್ಲಿದೆ.

ಹಲವು ಜಿಲ್ಲೆಗಳಲ್ಲಿ ರ್ಯಾಲಿ, ಪ್ರತಿಭಟನೆ
ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಲವು ಜಿಲ್ಲೆಗಳಲ್ಲಿ ರ್ಯಾಲಿ, ಪ್ರತಿಭಟನೆ ಹಾಗೂ ಘೋಷಣೆಗಳ ಮೂಲಕ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೆಲವೆಡೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ. ಒಟ್ಟಿನಲ್ಲಿ ಅಖಂಡ ಕರ್ನಾಟಕ ಬಂದ್ ಪ್ರತಿಭಟನೆ, ರ್ಯಾಲಿಗೆ ಮಾತ್ರ ಸೀಮಿತವಾಗಿದೆ.
ಒಟ್ಟಾರೆ, ಕರ್ನಾಟಕ ಬಂದ್ಗೆ ನಿರೀಕ್ಷಿತ ಮಟ್ಟದ ಪ್ರತಿಕ್ರಿಯೆ ಸಿಗದೆ, ರಾಜ್ಯದ ಬಹುತೇಕ ಭಾಗಗಳಲ್ಲಿ ಜನಜೀವನ ಸಹಜವಾಗಿದ್ದು, ಬಂದ್ ಪ್ರತಿಭಟನೆ ಮತ್ತು ರ್ಯಾಲಿಗಳಿಗೆ ಮಾತ್ರ ಸೀಮಿತವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ