ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ನಲಪಾಡ್ ಹ್ಯಾರಿಸ್ ಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ನಿಂದ ಸಮನ್ಸ್ ನೀಡಲಾಗಿದೆ.
ಈ ಕುರಿತಾಗಿ ಬೆಂಗಳೂರಿನ ಸಿದ್ಧಾಪುರದ ಎ. ತೇಜಸ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಅಂಗೀಕರಿಸಿದ ನ್ಯಾಯಾಲಯ ಜುಲೈ 21ರಂದು ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.
2025ರ ಅಕ್ಟೋಬರ್ 14ರಂದು ಆರ್.ಎಸ್.ಎಸ್. ಸದಸ್ಯರ ವಿರುದ್ಧ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದರು. ನಲಪಾಡ್ ಅವರು ಯುಟ್ಯೂಬ್ ಚಾನೆಲ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ಸಿದ್ದಾಪುರದ ತೇಜಸ್ ಖಾಸಗಿ ದೂರು ದಾಖಲಿಸಿದ್ದರು.
ಆರ್.ಎಸ್.ಎಸ್. ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಎ. ತೇಜಸ್ ಖಾಸಗಿ ದೂರು ದಾಖಲಿಸಿದ್ದರು. ಜುಲೈ 21ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ನಿಂದ ಪ್ರಿಯಾಂಕ್ ಖರ್ಗೆ, ನಲಪಾಡ್ ಅವರಿಗೆ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ.