LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

FACT CHECK : ‘NEET’ ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಟ್ರಾಫಿಕ್ ಕಾರಣವಲ್ಲ: ಬೆಂಗಳೂರು ಪೊಲೀಸರಿಂದ ಫ್ಯಾಕ್ಟ್‌ ಚೆಕ್.!

ಬೆಂಗಳೂರು : ನೀಟ್ (NEET) ಪರೀಕ್ಷೆಯ ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಬೆಂಗಳೂರು ಸಂಚಾರ ಪೊಲೀಸ್ (BTP) ಜಂಟಿಯಾಗಿ ಸ್ಪಷ್ಟನೆ ನೀಡಿವೆ.

ಸಿಸಿಟಿವಿ ವಿಶ್ಲೇಷಣೆ ಮತ್ತು ಮಾರ್ಗದ ಪರಿಶೀಲನೆಯು, ನೀಟ್ (NEET) ಅಭ್ಯರ್ಥಿಯು ನಿಗದಿತ ಸಮಯದ ನಂತರವೇ ಪರೀಕ್ಷಾ ಕೇಂದ್ರಕ್ಕೆ ತಲುಪಿದ್ದಾರೆ ಎಂಬುದನ್ನು ದೃಢಪಡಿಸಿದೆ. ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಹಜವಾಗಿಯೇ ಇತ್ತು ಮತ್ತು ಅಗತ್ಯವಿದ್ದ ಕಡೆಗಳಲ್ಲಿ ಸಂಚಾರ ಪೊಲೀಸರು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಅಭ್ಯರ್ಥಿಯು ತಡವಾಗಿ ಮನೆಯಿಂದ ಹೊರಟಿದ್ದು ಮತ್ತು ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದೇ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ.

ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಿಂದ ಉಂಟಾದ ಟ್ರಾಫಿಕ್ ಜಾಮ್‌ನಿಂದಾಗಿ ಅಭ್ಯರ್ಥಿ ತಡವಾಗಿದ್ದಾರೆ ಎಂಬ ಆರೋಪವನ್ನು ಪೊಲೀಸರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು, ಅಭ್ಯರ್ಥಿ ಮತ್ತು ಪೋಷಕರೊಂದಿಗಿನ ಸಂಭಾಷಣೆ ಹಾಗೂ ಮಾರ್ಗ ವಿಶ್ಲೇಷಣೆಯ ಆಧಾರದ ಮೇಲೆ ಪೊಲೀಸರು ಅಧಿಕೃತ ‘ಫ್ಯಾಕ್ಟ್ ಚೆಕ್’ (Fact Check) ವರದಿಯನ್ನು ಬಿಡುಗಡೆ ಮಾಡಿದ್ದಾರೆ.

ಘಟನೆಯ ಸಮಯದ ವಿವರಗಳು:

  • ಮಧ್ಯಾಹ್ನ 12:57: ಅಭ್ಯರ್ಥಿಯು ಆರ್.ಟಿ. ನಗರದಲ್ಲಿರುವ ತಮ್ಮ ಮನೆಯಿಂದ ಹೊರಟಿದ್ದಾರೆ.
  • ಮಧ್ಯಾಹ್ನ 01:30: ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಲು ನಿಗದಿಪಡಿಸಲಾಗಿದ್ದ ಕೊನೆಯ ಸಮಯ (Cut-off time).
  • ಮಧ್ಯಾಹ್ನ 01:33: ನಿಗದಿತ ಸಮಯ ಮುಗಿದ 3 ನಿಮಿಷಗಳ ನಂತರ ಅಭ್ಯರ್ಥಿಯು ಪರೀಕ್ಷಾ ಕೇಂದ್ರವನ್ನು ತಲುಪಿದ್ದಾರೆ.

ಪೊಲೀಸರು ಹೇಳುವುದೇನು?

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಪರೀಕ್ಷಾ ಕೇಂದ್ರದ ಪ್ರವೇಶಕ್ಕೆ ಕೇವಲ 33 ನಿಮಿಷಗಳು ಬಾಕಿ ಇರುವಾಗಷ್ಟೇ ಅಭ್ಯರ್ಥಿ ಮನೆಯಿಂದ ಹೊರಟಿರುವುದು ದೃಢಪಟ್ಟಿದೆ. ಸುಲಭವಾಗಿ ಮತ್ತು ಬೇಗ ತಲುಪಬಹುದಾದ ರಸ್ತೆಗಳಿದ್ದರೂ, ಅಭ್ಯರ್ಥಿಯು ಹೆಚ್ಚು ಸಮಯ ತೆಗೆದುಕೊಳ್ಳುವ ಸುದೀರ್ಘ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ವಿಶ್ಲೇಷಣೆಯಿಂದ ತಿಳಿದುಬಂದಿದೆ. ಅಂದು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಮಾನ್ಯವಾಗಿತ್ತು. ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಿಂದಾಗಿ ಯಾವುದೇ ರೀತಿಯ ಅಸಹಜ ಟ್ರಾಫಿಕ್ ಜಾಮ್ ಉಂಟಾಗಿರಲಿಲ್ಲ. ಅಭ್ಯರ್ಥಿ ಸಾಗಿದ ಮಾರ್ಗದಲ್ಲಿ ನಿಯೋಜನೆಗೊಂಡಿದ್ದ ಸಂಚಾರ ಪೊಲೀಸರು, ಅವರ ವಾಹನವು ಸುಲಭವಾಗಿ ಸಾಗಲು ನೆರವು ನೀಡಿದ್ದಾರೆ.

ಲಭ್ಯವಿರುವ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್‌ನಿಂದಾಗಿ ಅಭ್ಯರ್ಥಿ ತಡವಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಕೇವಲ 33 ನಿಮಿಷ ಮುಂಚಿತವಾಗಿ ಮನೆ ಬಿಟ್ಟಿರುವುದು ಮತ್ತು ತಪ್ಪು ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದೇ ಅಭ್ಯರ್ಥಿ ಪರೀಕ್ಷೆಗೆ ತಡವಾಗಿ ಬರಲು ಮುಖ್ಯ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.ಈ ಪ್ರಕರಣವು ಜೂನ್ 21ರಂದು ನಡೆದ ಕಾರ್ಯಕ್ರಮವೊಂದನ್ನು ಮುಂದಿಟ್ಟುಕೊಂಡು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ