ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಂಪನಿ ಇವರ ಜಂಟಿ ಆಶ್ರಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜೂನ್ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಚೇರಿ, 2ನೇ ಮಹಡಿ, ಅಯ್ಯಪ್ಪನ್ ಡು-ಟವರ್, ಎಂಐಜಿ -3 ಕೆಹೆಚ್ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್ಸಿ ಕಚೇರಿ ಎದುರು, ಬಳ್ಳಾರಿ – 583103.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದವರು ಭಾಗವಹಿಸಬಹುದು. ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಅವಕಾಶವಿದೆ. ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ (ಉಚಿತ ಪ್ರವೇಶ).ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಸ್ವ-ವಿವರಗಳ ಮಾಹಿತಿ ಪ್ರತಿ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಹಾಜರಾಗಬೇಕು.ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ 7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: ಆಗಸ್ಟ್ 31 ಕೊನೆಯ ದಿನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ: ಊಟ ಮತ್ತು ವಸತಿ ಸಹಾಯ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ SSP Postmatric Portal ಗೆ ಭೇಟಿ ನೀಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.