LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚದುರಂಗದ ಆಟದಲ್ಲಿ ಕಾಯಿ ನಡೆಯುವುದನ್ನು ಮೊದಲೇ ಹೇಳುತ್ತಾರೆಯೇ?; ಡಿಕೆಶಿ ಮಾರ್ಮಿಕ ಹೇಳಿಕೆ

ಬೆಂಗಳೂರು: ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ದೇವೇಗೌಡರಿಗೆ ಟಿಕೆಟ್ ತಪ್ಪಿದ ವಿಚಾರದ ಬಗ್ಗೆ ಏನು ಹೇಳಿದರು?

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸುರ್ಜೆವಾಲ ಅವರು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಸದ್ಯಕ್ಕೆ ಏನು ಮಾತನಾಡುವುದಿಲ್ಲ. ಅವರು ಮಾತಾಡಿದ್ದಾರೆ. ಆದರೆ ನಾನು ಮಾತಾಡಕ್ಕೆ ಹೋಗುವುದಿಲ್ಲ. ನಮ್ಮ ಪಕ್ಷದ ಚಿಂತನೆಯನ್ನು ನಾನು ಪಾಲನೆ ಮಾಡುತ್ತೇನೆ” ಎಂದರು.

‘ಸೂರಜ್ ಹೆಗ್ಡೆ ತ್ಯಾಗಕ್ಕೆ ಹೆಸರಾದವರು’

“ಸೂರಜ್ ಹೆಗ್ಡೆ ಆತ್ಮೀಯ ಸ್ನೇಹಿತ. ತ್ಯಾಗಕ್ಕೆ ಹೆಸರಾದವರು. ಇದೇ ಸ್ಥಾನ ಬೇಕು ಎಂದೂ ಕೇಳುತ್ತಿರಲಿಲ್ಲ. ನಾನು ಹಿಂದೆ ಅವರಿಗೆ ಮೈಸೂರು ಸಂಸದ ಸ್ಥಾನಕ್ಕೆ ಟಿಕೆಟ್ ಕೊಡಿಸಬೇಕು ಅಂತ ಬಹಳ ಹೋರಾಟ ಮಾಡಿದ್ದೆ. ಅವರು ದೇವರಾಜ ಅರಸು ಅವರ ಮೊಮ್ಮಗ. ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನ ಜೊತೆ ಪದಾಧಿಕಾರಿಯಾಗಿದ್ದವರು. ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾಗಿದ್ದವರು. ನಮ್ಮ ಸರ್ಕಾರ ರಾಜ್ಯ ಮಟ್ಟದ ಸಚಿವ ಸ್ಥಾನ ಕೊಟ್ಟಿತ್ತು. ಅವರ ಮೇಲೆ ನಾನು ದೊಡ್ಡ ಆಕಾಂಕ್ಷೆ ಇಟ್ಟುಕೊಂಡಿದ್ದೆ. ಪಕ್ಷ ಅವರ ಮೇಲೆ ಅವಲಂಬಿಸಿತ್ತು” ಎಂದು ತಿಳಿಸಿದರು.

‘ನಿಷ್ಠಾವಂತ ಕಾರ್ಯಕರ್ತ ಪಕ್ಷಕ್ಕೆ ಸಿಗುವುದು ವಿಶೇಷ’

“ನಿಷ್ಠಾವಂತ ಕಾರ್ಯಕರ್ತ ಪಕ್ಷಕ್ಕೆ ಸಿಗುವುದು ಬಹಳ ವಿಶೇಷ. ಈಗಲೂ ಕೂಡ ಅನೇಕ ವಿಚಾರಗಳನ್ನು ಅವರ ವಿಚಾರದಲ್ಲಿ ಚಿಂತನೆ ಮಾಡಲಾಗಿತ್ತು. ಎಐಸಿಸಿ ನಮ್ಮ ಕಾರ್ಯದರ್ಶಿಗಳಾಗಿ, ನಮ್ಮ ರಾಜ್ಯ ಮಟ್ಟದ ಪದಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು” ಎಂದರು.

ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ: ಡಿಕೆ ಶಿವಕುಮಾರ್

“ಅವರ ಕುಟುಂಬದ ದುಃಖ ನೋಡಲು ಆಗುತ್ತಿಲ್ಲ. ಅವರ ತಂದೆ ಕೂಡ ಒಬ್ಬ ಹಿರಿಯ ದೊಡ್ಡ ರಾಜಕಾರಣಿ. ವೈಯಕ್ತಿಕವಾಗಿ ನಮ್ಮೆಲ್ಲರಿಗೂ ಕೂಡ ಬಹಳ ದುಃಖ ಉಂಟಾಗಿದೆ. ಪಕ್ಷದ ಹಾಗೂ ಸರ್ಕಾರದ ಪರವಾಗಿ ಗೌರವ ನಮನ ಸಲ್ಲಿಸುತ್ತೇನೆ. ಕರ್ನಾಟಕ ಸರ್ಕಾರ ಅವರಿಗೆ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು. ಅವರ ಕುಟುಂಬದವರು ಅಂತಿಮ ಕಾರ್ಯ ಯಾವಾಗ ತೀರ್ಮಾನ ಮಾಡುತ್ತಾರೋ ಆಗ ಗೌರವವನ್ನು ಕೊಡುತ್ತೇವೆ. ಈ ವಿಚಾರವಾಗಿ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶ ತಿಳಿಸಿದ್ದೇನೆ. ಅವರ ಅಂತ್ಯಕ್ರಿಯೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ” ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ