ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೊಂದೇ ಯೋಜನೆಗಳ ಪರುಷ್ಕರಣೆಗೆ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಬೆನ್ನಲ್ಲೇ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೂ ನಿರ್ಧರಿಸಿದೆ.
ಗೃಹಜ್ಯೋತಿ ಪರಿಷ್ಕರಣೆ ಬಗ್ಗೆ ಎರಡು ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಪರಿಷ್ಕರಣೆ ವಿಚಾರವಾಗಿ ಇಲಾಖೆಗೆ ನಿಖರ ಮಾನದಂಡ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ.
ಗೃಹಜ್ಯೋತಿ ಯೊಜನೆಯಡಿ ರಾಜ್ಯದ 1.70 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಪಡೆಯುತ್ತಿವೆ. ಮಹತ್ವಾಕಾಂಕ್ಷಿ ಈ ಯೋಜನೆಗೆ ಪ್ರತಿ ತಿಂಗಳು 440 ಕೋಟಿ ರೂಪಾಯಿ ಹಣವನ್ನು ಸರ್ಕಾರ ವೆಚ್ಚ ಮಾಡುತ್ತಿದೆ. ಆದರೆ ಹಲವರು ಗೃಹಬಳಕೆ ಹೆಸರಿನಲ್ಲಿ ವಾಣಿಜ್ಯ ಬಳಕೆಗೂ ಫ್ರೀ ವಿದ್ಯುತ್ ಬಳಕೆ ಮಾಡುತ್ತಿರುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಪ್ರಾಪರ್ಟಿ, ಮಳಿಗೆಗಳಿಗೆ ಫ್ರೀ ವಿದ್ಯುತ್ ಪಡೆದವರಿಗೆ ಬಿಸಿ ಮುಟ್ಟಿಸಲು ಸಿದ್ಧತೆ ನಡೆದಿದ್ದು, ಉಚಿತ ವಿದ್ಯುತ್ ಪಡೆಯುತ್ತಿರುವ ಹೊರ ರಾಜ್ಯದ ಜನರಿಗೂ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ಆಧಾರ್, ಇ-ಕೆವೈಸಿ, ಮೊಬೈಲ್ ನಂಬರ್ ಮೂಲಕ ಮರುಪರಿಶೀಲನೆ ನಡೆಯಲಿದ್ದು, ಸೇವಾ ಸಿಂಧು ಪೋರ್ಟಲ್ನಲ್ಲಿ ಇದಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.
ಇನ್ನು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾಹಿತಿ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ ಎಂದಿದ್ದಾರೆ. ಈ ಹಿಂದೆ ತರಾತುರಿಯಲ್ಲಿ ಫಲಾನುಭವಿಗಳು ಯಾರದ್ದೋ ನಂಬರ್ ಕೊಟ್ಟಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಹಣ ಯಾರದ್ದೋ ಅಕೌಂಟ್ಗೆ ಹೋಗ್ತಿದೆ. ಅದರ ಬದಲು ಫಲಾನುಭವಿಗಳ ಖಾತೆಗೇ ಹಣ ಸಂದಾಯವಾಗಬೇಕು. ನಾವು ಕರ್ನಾಟಕದವರಿಗೆ ಮಾತ್ರ ಗ್ಯಾರಂಟಿಗಳನ್ನು ಕೋಡೋದು ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿ ನಾಯಕರು ಅನಗತ್ಯವಾಗಿ ರೋಪಗಳನ್ನು ಮಾಡುತ್ತಿದ್ದಾರೆ. ಅರ್ಹಫಲಾನುಭವಿಗಳಿಗೆ ಸಿಗಬೇಕು ಆ ನಟ್ಟಿನಲ್ಲಿ ಮಾತ್ರ ಕ್ರಮಕೈಗೊಳ್ಳಲಾಗುತ್ತಿದೆ ಎಣ್ದರು.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಪಕ್ಷ ಬಿಜೆಪಿಗರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೌಂಟರ್ ಕೊಟ್ಟಿದ್ದು, ಬಿಜೆಪಿ ತಮ್ಮ ಕಾರ್ಯಕರ್ತರಿಗೆ ಗ್ಯಾರಂಟಿ ಬೇಡ ಅಂತಾ ಅಭಿಯಾನ ಮಾಡಲಿ. ಅವರಿಗೆ ಗ್ಯಾರಂಟಿ ಬೇಡ ಅಂದ್ರೆ ಬೇಡ, ಬೇರೆಯವರು ಪಡೀತಾರೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹರಿಗೆ ಗ್ಯಾರಂಟಿ ಸಿಗಬೇಕೆಂದು ಪರಿಷ್ಕರಣೆ ಮಾಡಲಾಗ್ತಿದೆ ಎಂದವರು ಹೇಳಿದ್ದಾರೆ.