LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದ ಡಿಕೆ ಶಿವಕುಮಾರ್

ಬೆಂಗಳೂರು: “ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ. ತಮ್ಮ ಸ್ನೇಹದ ಮೂಲಕ ಅವರು ನಮ್ಮೆಲ್ಲರ ಹೃದಯ ಗೆದ್ದವರು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದರು.

ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ದಿವಂಗತ ಸೂರಜ್ ಹೆಗ್ಡೆ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

“ಇದೊಂದು ದುಃಖಕರ ಸಂದರ್ಭ. ಒಬ್ಬ ಸ್ನೇಹಿತ, ಕಾರ್ಯಕರ್ತ, ಮುಖಂಡನನ್ನು ಕಳೆದುಕೊಂಡಿದ್ದೇವೆ. ನಾವ್ಯಾರು ಶಾಶ್ವತವಾಗಿರಲು ಸಾಧ್ಯವಿಲ್ಲ. “ಆದರ್ಶವಿಲ್ಲದೇ ಬದುಕಿದರೆ, ಬದುಕಿಗೆ ಅವಮಾನ. ಸಾಧನೆ ಇಲ್ಲದೆ ಸತ್ತರೆ, ಸಾವಿಗೆ ಅವಮಾನ.” ನನ್ನ ಸ್ನೇಹಿತ ಸೂರಜ್ ಹೆಗ್ಡೆ ಆದರ್ಶ ಜೀವನ ನಡೆಸಿದ್ದಾರೆ. ತ್ಯಾಗ, ಪ್ರಾಮಾಣಿಕತೆ, ಕರ್ತವ್ಯಪ್ರಜ್ಞೆಯನ್ನು ಅಳವಡಿಸಿಕೊಂಡು ಅಧಿಕಾರ ಕೇಳದೆ ಕೆಲಸ ಮಾಡಿರುವ ಪಕ್ಷದ ಶಿಸ್ತಿನ ಸಿಪಾಯಿ” ಎಂದು ಸ್ಮರಿಸಿದರು.

“ದೇವರಾಜು ಅರಸು ಅವರ ರಕ್ತ ಅವರ ಮೈಯಲ್ಲಿ ಇರುವ ಕಾರಣಕ್ಕೆ, ಈ ಆದರ್ಶ ಅಳವಡಿಸಿಕೊಂಡು ಬದುಕಿದ್ದರು. ಅವರು ಅಗಲುವ ಮೂರು ದಿನಗಳ ಮೊದಲು ದೇವರಾಜ ಅರಸು ಅವರ ಪ್ರತಿಮೆಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ್ದೆ. ಅವರಿಗೆ ಗೌರವ ಸಲ್ಲಿಸಲು ನಮ್ಮದೇ ಆದ ಯೋಜನೆಗಳನ್ನು ಹೊಂದಿದ್ದೆವು. ಈ ಸಂದರ್ಭದಲ್ಲಿ ನಾನು ಅವುಗಳನ್ನು ಬಹಿರಂಗಪಡಿಸಲು ಬಯಸುವುದಿಲ್ಲ” ಎಂದರು.

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಬಹಳ ಮುಖ್ಯ. ಅವರು ನಮ್ಮನ್ನು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ತಮ್ಮ ಕೆಲಸಗಳನ್ನು ಬದಿಗೊತ್ತಿ, ಅವರಿಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದರು ಎಂದರೆ, ಸೂರಜ್ ಅವರಲ್ಲಿನ ನಿಷ್ಠೆ ಪ್ರಾಮಾಣಿಕತೆ, ಕರ್ತವ್ಯದ ಬಗ್ಗೆ ಇದ್ದ ಶ್ರದ್ಧೆಗೆ ಬೇರೆ ಉದಾಹರಣೆ ಬೇಡ” ಎಂದು ಹೇಳಿದರು.

“ಇಂದು ನಾನು ಮುಖ್ಯಮಂತ್ರಿಯಾಗಿ ಇಲ್ಲಿಗೆ ಬಂದಿಲ್ಲ. ನಾನು ಕೂಡ ಕಾರ್ಯಕರ್ತ. ನಾನು ಅವರ ಸ್ನೇಹಿತ. ಅದಕ್ಕಾಗಿ ಅವರಿಗೆ ನುಡಿನಮನ ಅರ್ಪಿಸಲು ಬಂದಿದ್ದೇವೆ. ಸೂರಜ್ ಎಂದರೆ ಬೆಳಕು ನೀಡುವ ಸೂರ್ಯ. ನಗುತ್ತಲೇ ತನ್ನ ಕೊನೆಯುಸಿರೆಳೆದಿದ್ದಾರೆ. ನಾನು ಅವರ ತಂದೆಯನ್ನು ಹತ್ತಿರದಿಂದ ಬಲ್ಲೆ. ನಾನು ವಿದ್ಯಾರ್ಥಿ ನಾಯಕನಾಗಿ ಚುನಾವಣೆ ಗೆದ್ದಾಗ, ಅವರ ಮನೆಗೆ ಹೋಗಿದ್ದೆ. ಅವರು ನಮ್ಮದೇ ಕ್ಷೇತ್ರದವರು. ಯಾರಿಗೂ ಯಾವ ಸ್ಥಾನ ಶಾಶ್ವತವಲ್ಲ. ಆದರೆ ಸ್ಥಾನ ಸಿಕ್ಕಾಗ ನಾವು ಆದರ್ಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅವರ ಕುಟುಂಬದವರು ತೆಗೆದುಕೊಂಡಿರುವ ಧೈರ್ಯವನ್ನು ನಾವು ಸ್ವಾಗತಿಸುತ್ತೇವೆ. ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿದ್ದಾಗ ಎಐಸಿಸಿ ಕಾರ್ಯದರ್ಶಿಯಾಗಿ, ನಮ್ಮ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ” ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ