LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ದೇಶದಲ್ಲಿ ಶ್ರೀರಾಮ ಲೆಕ್ಕಕೊಡಬೇಕು; ರಾಮನ ಹೆಸರಲ್ಲಿ ರಾಜಕೀಯ ಮಾಡುವವರು ಲೆಕ್ಕ ಕೊಡಬಾರದೆ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ನವದೆಹಲಿ: ಆರ್.ಎಸ್.ಎಸ್ ನೊಂದಣಿ ಹಾಗೂ ಕಾನೂನು ಬದ್ಧತೆ ಬಗ್ಗೆ ಪ್ರಶ್ನಿಸಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವಿನ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಈನಡುವೆ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ದೇಶದಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ರಾಮನ ಹೆಸರಿನಲ್ಲಿ ರಾಜಕೀಯ ಮಾಡಿದವರು ಲೆಕ್ಕ ಕೊಡಬಾರದಾ? ಎಂದು ಪ್ರಶ್ನೆ ಮಾಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರ ಪ್ರಶ್ನೆಗಳಿಗೆ ಉತ್ತರ ನೀಡುವ ನಿಟ್ಟಿ ಮಾತನಾಡಿದರು. ಅಯೋಧ್ಯೆಯಲ್ಲಿ ದೇಣಿಗೆ ವಿಚಾರದಲ್ಲಿ ಹಗರಣ ನಡೆದಿದೆ ನಮ್ಮ ದೇಶದಲ್ಲಿ ಶ್ರೀರಾಮನೇ ಲೆಕ್ಕ ಕೊಡುವ ಪರಿಸ್ಥಿತಿ ಬಂದಿದೆ. ಶ್ರೀರಾಮನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾಕೆ ಲೆಕ್ಕ ಕೊಡಬಾರದು? ಎಂದು ಪ್ರಶ್ನಿಸಿದರು.

ಬಿಜೆಪಿಯವರು ಆರ್‌.ಎಸ್‌.ಎಸ್‌ನ ಆಳು ಮಕ್ಕಳು, ಅವರು ವಿರೋಧ ಮಾಡೇ ಮಾಡ್ತಾರೆ. ಪಾರದರ್ಶಕತೆ ಕೇಳುವುದು ತಪ್ಪಾ? ಪತ್ರದಲ್ಲಿ ತಪ್ಪೇನಿದೆ ಹೇಳಿ? ನಿತ್ಯ ಸಾವಿರಾರು ಶಾಖಾ ಸಭೆಗಳನ್ನ ನಡೆಸಲಾಗುತ್ತಿದೆ. ಆರ್‌ಎಸ್‌ಎಸ್‌ ಮಾಹಿತಿ ನೀಡದಂತೆ ಲಕ್ಷಾಂತರ ಜನರನ್ನ ಸೇರಿಸಿ ಪಂಥಸಂಚಲನ ಮಾಡುತ್ತಿದ್ದಾರೆ. ಅಖಿಲ ಭಾರತ ಪ್ರತಿನಿಧಿ ಸಭಾ ಈ ಮಾಹಿತಿ ನೀಡಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪಥಸಂಚಲನ ಮಾಡಿದರೆ ಪ್ರಶ್ನೆ ಮಾಡಬಾರದಾ? ಎಂದು ಕೇಳಿದರು.

ಜವಬ್ದಾರಿ ಸ್ಥಾನದಲ್ಲಿ ಕುಳಿತು ನಾನು ಕೇಳುತ್ತಿದ್ದೇನೆ. ಯಾವುದೇ ಧರ್ಮದ ಸಂಘ ಸಂಸ್ಥೆಗಳಾದರೂ ಕಾನೂನು ಅಡಿಯಲ್ಲಿ ಬರಬೇಕು. ಯಾವುದೇ ಕಾರ್ಯಕ್ರಮ ಮಾಡಿದ್ರೂ ಪೊಲೀಸ್ ಅನುಮತಿ ಪಡೆಯಬೇಕು. ಆರ್‌ಎಸ್‌ಎಸ್ ಪಡೆಯುವುದು ತಪ್ಪಾ? ನಿಮ್ಮ ಆಡಳಿತ ಸಿಬ್ಬಂದಿ ಯಾರು ಎಂದು ತಿಳಿದುಕೊಳ್ಳಬಾರದಾ? ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ ಎಷ್ಟು ಬರ್ತಿದೆ? ಇದೆಲ್ಲಾ ಕೇಳಬಾರದಾ? ಆರ್‌ಎಸ್‌ಎಸ್‌ನವರು ಕಾನೂನು ಹೋರಾಟಕ್ಕೆ ಮೂರು ಕೋಟಿ ಖರ್ಚು ಮಾಡಿದ್ದಾರೆ. ಸಂಘದ ನಾಯಕರು ಅಮೆರಿಕ ಪ್ರವಾಸ ಮಾಡುತ್ತಾರೆ. ಅವರಿಗೆ ಹಣ ಎಲ್ಲಿಂದ ಬರ್ತಿದೆ? ಅವರ ಚಟುವಟಿಕೆಗಳು ಏನು? ಎಂದು ಸಾಲು ಸಾಲು ಪ್ರಶ್ನೆ ಮಾಡಿದರು.

ಸಫಾಯಿ ಕರ್ಮಚಾರಿಗೂ ನೊಂದಣಿ ಬೇಕು, ಇವರಿಗೆ ನೋಂದಣಿ ಯಾಕೆ ಇಲ್ಲ? ಎಲ್ಲದಕ್ಕೂ ಧರ್ಮ ಅಡ್ಡ ತರ್ತಾರೆ, ನಾನು ಎಲ್ಲಿ ಧರ್ಮ ಉಲ್ಲೇಖಿಸಿದ್ದೇನೆ? ನನ್ನ ಪತ್ರದಲ್ಲಿ ಹಿಂದೂ ಅನ್ನೊ ಪದ ಎಲ್ಲಿದೆ? ಕೆಲವು ಕಡೆ ನನ್ನ ಪತ್ರಕ್ಕೆ ಸರ ಸಂಘ ಸಂಚಾಲಕ ಮೋಹನ್ ಭಾಗವತ್ ಉತ್ತರಿಸಿದ್ದಾರೆ ಎನ್ನಲಾಗುತ್ತಿದೆ. ವಾಸ್ತವದಲ್ಲಿ ಅವರು ಇನ್ನು ಉತ್ತರ ನೀಡಿಲ್ಲ ಮೋಹನ್ ಬಾಗವತ್ ಅವರು ಜೂನ್ 13 ರಂದು ನೀಡಿದ ಹೇಳಿಕೆಯನ್ನು ತಿರುಚಲಾಗುತ್ತಿದೆ. ನಾನು ನಿನ್ನೆ ಪತ್ರ ಬಿಡುಗಡೆ ಮಾಡಿದ್ದೇನೆ. ಅದಕ್ಕೂ ಮುನ್ನ ಹೇಳಿಕೆ ನೀಡಿದ್ದಾರೆ, ಹಾಗಿದ್ದಾಗ ಅದು ಉತ್ತರ ಹೇಗೆ ಆಗಲು ಸಾಧ್ಯ? ನಾನು ಧರ್ಮಕ್ಕೆ ನೋಂದಣಿ ಕೇಳ್ತಿಲ್ಲ, ಸಂಘಕ್ಕೆ ಕೇಳ್ತಿದ್ದೇನೆ ಅವರು ಉತ್ತರಿಸಲಿ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ