LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ಮಳವಳ್ಳಿ ಶಿವಣ್ಣ, ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ತಿಪ್ಪಣ್ಣಪ್ಪ ಕಮಕನೂರ ಅವರನ್ನು ವಿಧಾನಸೌಧದಲ್ಲಿ ಅಭಿನಂದಿಸಿ, ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ ಎಂದು ಹೇಳಿದ್ದಾರೆ.

ನಾವು ಯಾವ ಹೆಜ್ಜೆಯನ್ನಿಟ್ಟು ಮುಂದುವರಿಯುತ್ತಿದ್ದೇವೆಯೋ ಅದಕ್ಕೆ ನಾವೂ ಜೊತೆಗಿದ್ದೇವೆ ಎಂದು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ನಮ್ಮ ಪಕ್ಷದ ಶಾಸಕರೂ ಒಗ್ಗಟ್ಟಾಗಿ ಬೆಂಬಲಿಸಿದ್ದಾರೆ. ನಮಗೆ ಹೆಚ್ಚಿನ ಮತ ನೀಡಿದ ಬೇರೆ ಬೇರೆ ಪಕ್ಷದ ವಿಶ್ವಾಸವನ್ನು ನಾವು ಉಳಿಸಿಕೊಳ್ಳುತ್ತೇವೆ.‌ ನೀವು ನಮಗೆ ನೀಡಿದ ವಿಶ್ವಾಸ ಜನರಿಗೆ ನೀಡಿದ ಶಕ್ತಿ ಎಂದು ತಿಳಿಸಿದ್ದಾರೆ.

ನಮ್ಮ ಪಕ್ಷದ ಶಾಸಕರ ಒಂದು ಮತವೂ ತಿರಸ್ಕೃತವಾಗಬಾರದು ಎಂದು ತರಬೇತಿ ನೀಡಲಾಗಿತ್ತು.‌ ಇದಕ್ಕೆ ಸಹಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ. ಇದಕ್ಕೆ ದುಡಿದಂತಹ ಪಕ್ಷದ ಎಲ್ಲಾ ಶಾಸಕರು, ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹಾಗೂ ಇತರೇ ಕಾರ್ಯದರ್ಶಿಗಳನ್ನು ನಾನು ಅಭಿನಂದಿಸುತ್ತೇನೆ ಎಂದರು.

ನಮ್ಮ‌ ಪಕ್ಷದಿಂದ ಐದು ಅಭ್ಯರ್ಥಿಗಳು ನಿಂತಿದ್ದರು. ನಮ್ಮ ಶಾಸಕರ ಸಂಖ್ಯಾಬಲ ಎಷ್ಟಿತ್ತು ಎಂಬುದು ಮಾಧ್ಯಮಗಳಿಗೆ ತಿಳಿದಿತ್ತು. ಐದು ಜನ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿತ್ತು ಅವರು ಗೆದ್ದಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ್ ಕಾರ್ತಿಕ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಜನಸೇವೆ ನಿರಂತರವಾಗಿರಲಿ, ನಾಡಿನ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅಪಾರವಾಗಿರಲಿ ಎಂದು ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ