ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ ನಮ್ಮ ರಾಜ್ಯದವರು ಉಚಿತ ವಿದ್ಯುತ್ ಪಡೆಯುತ್ತಿದ್ದಾರಾ? ಬೇರೆ ರಾಜ್ಯದವರು ವಿದ್ಯುತ್ ಪಡೆಯುತ್ತಿದ್ದಾರಾ ಎಂದು ಪರಿಶೀಲನೆ ಮಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಮ್ಮ ರಾಜ್ಯದಲ್ಲಿ ಈಗಾಗಲೇ 20 ಲಕ್ಷ ಜನರು ಹೊರ ರಾಜ್ಯಗಳಿಂದ ಬಂದು ವಿವಿಧ ಕೆಲಸ ಮಾಡುತ್ತಿದ್ದಾರೆ. ಅವರ ಮತ ಇಲ್ಲಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಬೇಕಲ್ಲವೇ? ನಾವು ನಮ್ಮ ಮತದಾರರಿಗೆ ಶಕ್ತಿ ನೀಡಬೇಕೋ. ಹೊರಗಿನವರಿಗೆ ಶಕ್ತಿ ನೀಡಬೇಕೋ? ಇಲ್ಲಿ ಮತದಾನದ ಹಕ್ಕು ಇರುವವರಿಗೆ ಯೋಜನೆ ನೀಡುವುದು ನಮ್ಮ ಕರ್ತವ್ಯ. ಬಸ್ ಗಳಲ್ಲಿಯೂ ರಾಜ್ಯದ ಮಹಿಳೆಯರಿಗೆ ಗುರುತಿನ ಚೀಟಿ ನೀಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.
ಹೊರ ರಾಜ್ಯಗಳಲ್ಲಿ ಮತದಾನದ ಹಕ್ಕು ಇಲ್ಲದವರಿಗೆ ಸರ್ಕಾರದ ಯೋಜನೆ ತೆಗೆಯಲು ಹೊರಟಿದ್ದಾರೆ. ಮುಂದೆ ಮತದಾನ ಇಲ್ಲದಿದ್ದರೆ ಕೇಂದ್ರದಿಂದ ಯಾವುದೇ ಹಕ್ಕನ್ನು ನೀಡುವುದಿಲ್ಲ. ಹೀಗಾಗಿ ನಮ್ಮ ರಾಜ್ಯದವರಿಗೆ ತೊಂದರೆ ಆಗಬಾರದು ಎಂದು ಹೇಳಿದ್ದಾರೆ.
ವೃದ್ದಾಪ್ಯ ವೇತನ, ವಿಧವಾ ವೇತನ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಕಿತ್ತು ಹಾಕುವುದು ನಮ್ಮ ಉದ್ದೇಶವಲ್ಲ. ಯೋಜನೆಗಳು ನೈಜ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದ್ದೇವೆ. ಹೀಗಾಗಿ ಮತ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಸಿಗುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.