LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ ; ಸಾರ್ವಜನಿಕರಿಗೆ ಎಚ್ಚರಿಕೆ

ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿಯಾದ ಅಮೃತ್ ಜಿ. ಎಂಬ ವ್ಯಕ್ತಿಯು ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರವನ್ನು ಸೃಷ್ಟಿಸಿದ್ದಾನೆ. ಅದರಲ್ಲಿ ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ಪದವನ್ನು ಮುದ್ರಿಸಿ, ಸುಮಾರು 150 ಕ್ಕಿಂತಲೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣವನ್ನು ಪಡೆದು ವಂಚಿಸಿರುವುದು ತಿಳಿದುಬಂದಿದೆ.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರನ್ನು ಬಳಸಿಕೊಂಡು ಸಾಲ ಮಂಜೂರು ಮಾಡಿಸಿಕೊಡುವುದಾಗಿ ಅಥವಾ ಸಾಲ ಮಂಜೂರು ಮಾಡಿಸಲು ಹಣದ ಆಮಿಷ ಒಡ್ಡಿ ಈ ವ್ಯಕ್ತಿ ವಂಚನೆಗೆ ಯತ್ನಿಸುತ್ತಿದ್ದಾನೆ. ಆದ್ದರಿಂದ ಸಾರ್ವಜನಿಕರು ಯಾರೂ ಕೂಡ ಈತನಿಗೆ ಹಣವನ್ನು ನೀಡಬಾರದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸದರಿ ವ್ಯಕ್ತಿಯೊಂದಿಗೆ ನಿಗಮವು ಯಾವುದೇ ಯೋಜನೆಯ ಬಗ್ಗೆ ಪತ್ರ ವ್ಯವಹಾರಗಳನ್ನು ಮಾಡಿಲ್ಲ. ಹಾಗೂ ಈ ವ್ಯಕ್ತಿಗೂ ನಮ್ಮ ನಿಗಮಕ್ಕೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಜಿಲ್ಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ಸಾರ್ವಜನಿಕರು ಇಂತಹ ವಂಚಕರ ಬಗ್ಗೆ ಜಾಗರೂಕರಾಗಿರಬೇಕು ಎಂದು ವಿನಂತಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ-ಸಹಾಯ ಯೋಜನೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ‘ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ವೆಬ್‌ಸೈಟ್ https://ssp.postmatric.karnataka.gov.in ಮೂಲಕ ದಿ: 31/08/2026 ರೊಳಗಾಗಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770004, ಇ-ಮೇಲ್ [email protected] ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ [email protected] ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ