LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕೆದಾಟು ಯೋಜನೆ ವಿರುದ್ಧ ತಿರುಗಿಬಿದ್ದ ಟಿವಿಕೆಗೆ ಕೊಟ್ಟಿರುವ ಬೆಂಬಲವನ್ನು ಕಾಂಗ್ರೆಸ್ ಹಿಂಪಡೆಯಲಿ; ಆರ್ ಅಶೋಕ್ ಸವಾಲು

ಬೆಂಗಳೂರು: ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್‌ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌, ಟಿವಿಕೆ ಜೊತೆ ಸೇರಿಕೊಂಡಿದೆ. ಅದೇ ಟಿವಿಕೆ ಪಕ್ಷ ಈಗ ಮೇಕೆದಾಟು ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಧೈರ್ಯವಿದ್ದರೆ ಟಿವಿಕೆಗೆ ನೀಡಿದ ಬೆಂಬಲವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಡಬಲ್‌ ಸ್ಟಾಂಡರ್ಡ್‌ ಹಾಗೂ ಎರಡು ನಾಲಿಗೆ ಎಂದು ಒಪ್ಪಿಕೊಳ್ಳಬೇಕು. ಕಾಂಗ್ರೆಸ್‌ ಸರ್ಕಾರ ಇರುವವರೆಗೂ ಮೇಕೆದಾಟು ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಇವರು ಪಾದಯಾತ್ರೆ ಮಾಡಿದ್ದು ಕೇವಲ ಮತಕ್ಕಾಗಿ ಎಂದು ಟೀಕೆ ಮಾಡಿದರು.

ಕಾಂಗ್ರೆಸ್‌ ಸರ್ಕಾರ ರೇಷನ್‌ ಕಾರ್ಡ್‌ಗಳಿಗೆ ಕತ್ತರಿ ಹಾಕಿ ಗ್ಯಾರಂಟಿ ಫಲಾನುಭವಿಗಳನ್ನು ಕಡಿಮೆ ಮಾಡುತ್ತಿದೆ. ಉಚಿತ ವಿದ್ಯುತ್‌ ಪಡೆಯುವ ಯೋಜನೆಯಲ್ಲೂ ಬೋಗಸ್‌ ಇದೆ ಎನ್ನುತ್ತಿದ್ದಾರೆ. ಸುಮಾರು 20 ಲಕ್ಷ ಫಲಾನುಭವಿಗಳನ್ನು ಕಡಿಮೆ ಮಾಡಲು ಕುತಂತ್ರ ಮಾಡಲಾಗಿದೆ. 1.20 ಲಕ್ಷ ಕೋಟಿ ಸಾಲವಿದ್ದು, ಅದಕ್ಕೆ ಬಡ್ಡಿ ಕಟ್ಟಲು ಕೂಡ ಆಗುತ್ತಿಲ್ಲ. ನೌಕರರಿಗೆ ಸಂಬಳ ಕೂಡ ನೀಡುತ್ತಿಲ್ಲ. ನಾಲ್ಕು ತಿಂಗಳಿಂದ ಅನೇಕ ಪಿಂಚಣಿಗಳನ್ನು ನೀಡಿಲ್ಲ. ಪಿಂಚಣಿ ನೀಡಿಲ್ಲವೆಂದರೆ ಸರ್ಕಾರ ಪಾಪರ್‌ ಆಗಿದೆ ಎಂದೇ ಅರ್ಥ ಎಂದರು.

ಮಳೆ ಕಡಿಮೆಯಾಗಿರುವುದರಿಂದ ಬರ ಶುರುವಾಗಲಿದೆ. ಮುಂದೆ ಹಸುಗಳಿಗೆ ಮೇವು ಇರುವುದಿಲ್ಲ. ಇಂತಹ ಸಮಯದಲ್ಲಿ ಮೇವು ನೀಡುವ ಬಿಡದಿಯಲ್ಲಿ ಲೇಔಟ್‌ ಮಾಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಆಹಾರ ಧಾನ್ಯಗಳ ಕೊರತೆಗೆ ಏನು ಯೋಜನೆ ರೂಪಿಸುತ್ತಿದ್ದಾರೆ ಎಂದು ತಿಳಿದಿಲ್ಲ. ಸಿದ್ದರಾಮಯ್ಯನವರಿಗೆ ಆಡಳಿತದ ಬಗ್ಗೆ ಗೊತ್ತಿತ್ತು. ಆದರೆ ಸಿಎಂ ಡಿ.ಕೆ.ಶಿವಕುಮಾರ್‌ಗೆ ರಾಜಕೀಯ ಗೊತ್ತಿದೆಯೇ ಹೊರತು ಆಡಳಿತದ ಬಗ್ಗೆ ಏನೂ ಗೊತ್ತಿಲ್ಲ ಎಂದರು.

ಅಡ್ಡ ಮತದಾನ

ಅಡ್ಡ ಮತದಾನ ಮಾಡಿರುವುದರ ಬಗ್ಗೆ ಹಲವು ಮಾಹಿತಿ ಬಂದಿದೆ. ಈ ಬಗ್ಗೆ ಸಮಿತಿ ರಚಿಸಿದ್ದು, ಸತ್ಯ ಹೊರಬರಲಿದೆ. ಪಕ್ಷಕ್ಕೆ ಚೂರಿ ಹಾಕಿದ ಖದೀಮರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಡ್ಡ ಮತದಾನ ಮಾಡಿದ್ದು ಯಾರೆಂದು ತಿಳಿಯಲು ಸ್ವಲ್ಪ ಸಮಯ ಬೇಕಾಗುತ್ತದೆ. ಕೆಲವರು ಹಣ ಪಡೆದು ಮತ ಚಲಾಯಿಸಿದ್ದಾರೆ. ಕೋಟ್ಯಂತರ ಹಣ ಹಾಗೂ ಅನುದಾನದ ವಿಚಾರ ಹೊರಬರಲಿದೆ. ಮತದಾನದ ಸಮಯದಲ್ಲಿ ಯಾರು ಎಲ್ಲಿದ್ದರು, ಯಾರು ಯಾರೊಂದಿಗೆ ಮಾತಾಡಿದ್ದರು ಎಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ವಿಚಾರವನ್ನು ಕೇಂದ್ರದ ನಾಯಕರ ಗಮನಕ್ಕೂ ತರಲಾಗಿದೆ. ಮುಂದಿನ ವಾರ ಬಂದು ಭೇಟಿ ಮಾಡುವಂತೆ ಕೇಂದ್ರದ ನಾಯಕರು ಸೂಚಿಸಿದ್ದಾರೆ. ಆ ಸಮಯದಲ್ಲಿ ವರದಿ ನೀಡುತ್ತೇವೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿದ್ದು, ಅವರಿಗೂ ಇದರಿಂದ ಬೇಸರವಾಗಿದೆ. ಇದಕ್ಕೆ ಸರಿಯಾದ ಉತ್ತರ ನೀಡುತ್ತೇವೆ. ಇದು ಬಿಜೆಪಿ ಅಥವಾ ಜೆಡಿಎಸ್‌ನಿಂದ ಆಗಿದೆ ಎಂದು ಹೇಳಲ್ಲ. ಮೋಸ ಮಾಡಿರುವವರು ಯಾರು ಎಂದು ಕಂಡುಹಿಡಿಯುತ್ತೇವೆ. ಅಡ್ಡ ಮತದಾನ ಮಾಡಿರುವವರು ಮತ್ತೆ ಶಾಸಕರಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ