LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕೆದಾಟು ಯೋಜನೆ ವಿರುದ್ಧ ತಿರುಗಿಬಿದ್ದ ಟಿವಿಕೆಗೆ ಕೊಟ್ಟಿರುವ ಬೆಂಬಲವನ್ನು ಕಾಂಗ್ರೆಸ್ ಹಿಂಪಡೆಯಲಿ; ಆರ್ ಅಶೋಕ್ ಸವಾಲು

ಬೆಂಗಳೂರು: ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್‌ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌, ಟಿವಿಕೆ ಜೊತೆ ಸೇರಿಕೊಂಡಿದೆ. ಅದೇ ಟಿವಿಕೆ ಪಕ್ಷ ಈಗ ಮೇಕೆದಾಟು ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಧೈರ್ಯವಿದ್ದರೆ ಟಿವಿಕೆಗೆ ನೀಡಿದ ಬೆಂಬಲವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಡಬಲ್‌ ಸ್ಟಾಂಡರ್ಡ್‌ ಹಾಗೂ ಎರಡು ನಾಲಿಗೆ ಎಂದು ಒಪ್ಪಿಕೊಳ್ಳಬೇಕು. ಕಾಂಗ್ರೆಸ್‌ ಸರ್ಕಾರ ಇರುವವರೆಗೂ ಮೇಕೆದಾಟು ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಇವರು ಪಾದಯಾತ್ರೆ ಮಾಡಿದ್ದು ಕೇವಲ ಮತಕ್ಕಾಗಿ ಎಂದು ಟೀಕೆ ಮಾಡಿದರು.

ಕಾಂಗ್ರೆಸ್‌ ಸರ್ಕಾರ ರೇಷನ್‌ ಕಾರ್ಡ್‌ಗಳಿಗೆ ಕತ್ತರಿ ಹಾಕಿ ಗ್ಯಾರಂಟಿ ಫಲಾನುಭವಿಗಳನ್ನು ಕಡಿಮೆ ಮಾಡುತ್ತಿದೆ. ಉಚಿತ ವಿದ್ಯುತ್‌ ಪಡೆಯುವ ಯೋಜನೆಯಲ್ಲೂ ಬೋಗಸ್‌ ಇದೆ ಎನ್ನುತ್ತಿದ್ದಾರೆ. ಸುಮಾರು 20 ಲಕ್ಷ ಫಲಾನುಭವಿಗಳನ್ನು ಕಡಿಮೆ ಮಾಡಲು ಕುತಂತ್ರ ಮಾಡಲಾಗಿದೆ. 1.20 ಲಕ್ಷ ಕೋಟಿ ಸಾಲವಿದ್ದು, ಅದಕ್ಕೆ ಬಡ್ಡಿ ಕಟ್ಟಲು ಕೂಡ ಆಗುತ್ತಿಲ್ಲ. ನೌಕರರಿಗೆ ಸಂಬಳ ಕೂಡ ನೀಡುತ್ತಿಲ್ಲ. ನಾಲ್ಕು ತಿಂಗಳಿಂದ ಅನೇಕ ಪಿಂಚಣಿಗಳನ್ನು ನೀಡಿಲ್ಲ. ಪಿಂಚಣಿ ನೀಡಿಲ್ಲವೆಂದರೆ ಸರ್ಕಾರ ಪಾಪರ್‌ ಆಗಿದೆ ಎಂದೇ ಅರ್ಥ ಎಂದರು.

ಮಳೆ ಕಡಿಮೆಯಾಗಿರುವುದರಿಂದ ಬರ ಶುರುವಾಗಲಿದೆ. ಮುಂದೆ ಹಸುಗಳಿಗೆ ಮೇವು ಇರುವುದಿಲ್ಲ. ಇಂತಹ ಸಮಯದಲ್ಲಿ ಮೇವು ನೀಡುವ ಬಿಡದಿಯಲ್ಲಿ ಲೇಔಟ್‌ ಮಾಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಆಹಾರ ಧಾನ್ಯಗಳ ಕೊರತೆಗೆ ಏನು ಯೋಜನೆ ರೂಪಿಸುತ್ತಿದ್ದಾರೆ ಎಂದು ತಿಳಿದಿಲ್ಲ. ಸಿದ್ದರಾಮಯ್ಯನವರಿಗೆ ಆಡಳಿತದ ಬಗ್ಗೆ ಗೊತ್ತಿತ್ತು. ಆದರೆ ಸಿಎಂ ಡಿ.ಕೆ.ಶಿವಕುಮಾರ್‌ಗೆ ರಾಜಕೀಯ ಗೊತ್ತಿದೆಯೇ ಹೊರತು ಆಡಳಿತದ ಬಗ್ಗೆ ಏನೂ ಗೊತ್ತಿಲ್ಲ ಎಂದರು.

ಅಡ್ಡ ಮತದಾನ

ಅಡ್ಡ ಮತದಾನ ಮಾಡಿರುವುದರ ಬಗ್ಗೆ ಹಲವು ಮಾಹಿತಿ ಬಂದಿದೆ. ಈ ಬಗ್ಗೆ ಸಮಿತಿ ರಚಿಸಿದ್ದು, ಸತ್ಯ ಹೊರಬರಲಿದೆ. ಪಕ್ಷಕ್ಕೆ ಚೂರಿ ಹಾಕಿದ ಖದೀಮರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಡ್ಡ ಮತದಾನ ಮಾಡಿದ್ದು ಯಾರೆಂದು ತಿಳಿಯಲು ಸ್ವಲ್ಪ ಸಮಯ ಬೇಕಾಗುತ್ತದೆ. ಕೆಲವರು ಹಣ ಪಡೆದು ಮತ ಚಲಾಯಿಸಿದ್ದಾರೆ. ಕೋಟ್ಯಂತರ ಹಣ ಹಾಗೂ ಅನುದಾನದ ವಿಚಾರ ಹೊರಬರಲಿದೆ. ಮತದಾನದ ಸಮಯದಲ್ಲಿ ಯಾರು ಎಲ್ಲಿದ್ದರು, ಯಾರು ಯಾರೊಂದಿಗೆ ಮಾತಾಡಿದ್ದರು ಎಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ವಿಚಾರವನ್ನು ಕೇಂದ್ರದ ನಾಯಕರ ಗಮನಕ್ಕೂ ತರಲಾಗಿದೆ. ಮುಂದಿನ ವಾರ ಬಂದು ಭೇಟಿ ಮಾಡುವಂತೆ ಕೇಂದ್ರದ ನಾಯಕರು ಸೂಚಿಸಿದ್ದಾರೆ. ಆ ಸಮಯದಲ್ಲಿ ವರದಿ ನೀಡುತ್ತೇವೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿದ್ದು, ಅವರಿಗೂ ಇದರಿಂದ ಬೇಸರವಾಗಿದೆ. ಇದಕ್ಕೆ ಸರಿಯಾದ ಉತ್ತರ ನೀಡುತ್ತೇವೆ. ಇದು ಬಿಜೆಪಿ ಅಥವಾ ಜೆಡಿಎಸ್‌ನಿಂದ ಆಗಿದೆ ಎಂದು ಹೇಳಲ್ಲ. ಮೋಸ ಮಾಡಿರುವವರು ಯಾರು ಎಂದು ಕಂಡುಹಿಡಿಯುತ್ತೇವೆ. ಅಡ್ಡ ಮತದಾನ ಮಾಡಿರುವವರು ಮತ್ತೆ ಶಾಸಕರಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ