LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರುದ್ರಪ್ರಯಾಗದ ನಾಗರಸು ಗುರುದ್ವಾರಕ್ಕೆ ಶಸ್ತ್ರಸಜ್ಜಿತ ಗುಂಪಿನಿಂದ ದಾಳಿ: ಭಕ್ತರೊಬ್ಬರನ್ನು ಒತ್ತೆಯಾಳಾಗಿರಿಸಿದ ದುಷ್ಕರ್ಮಿಗಳು

ಡೆಹ್ರಾಡೂನ್: ನಾಗರಸು ಗುರುದ್ವಾರಕ್ಕೆ ಶಸ್ತ್ರಸಜ್ಜಿತ ನಿಹಾಂಗ್‌ಗಳ ಗುಂಪೊಂದು ದಾಳಿ ನಡೆಸಿ, ಅಲ್ಲಿದ್ದ ವೃದ್ಧ ಭಕ್ತರೊಬ್ಬರನ್ನು ಒತ್ತೆಯಾಳಾಗಿರಿಸಿಕೊಂಡಿರುವ ಘಟನೆ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ನಡೆದಿದೆ.

ಬಂಧಿತ ಸಹಚರರ ಬಿಡುಗಡೆ ಹಾಗೂ ಗುರುದ್ವಾರದಲ್ಲಿ ವಾಸ್ತವ್ಯಕ್ಕೆ ಕೊಠಡಿಗಳ ನೀಡುವಂತೆ ಒತ್ತಾಯಿಸಿ ಭಕ್ತರನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ. ಈಟಿ, ಕತ್ತಿ, ಕೊಡಲಿಗಳೊಂದಿಗೆ ನುಗ್ಗಿದ ಆರು ಜನರ ಶಸ್ತ್ರಸಜ್ಜಿತ ನಿಹಾಂಗ್ ಸಿಖ್ಖರ ಗುಂಪೊಂದು, ವೃದ್ಧ ಸಿಖ್ ಭಕ್ತರೊಬ್ಬರನ್ನು ಮೂರನೇ ಮಹಡಿಯ ಛಾವಣಿ ಮೇಲೆ ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ.

ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗರ್ವಾಲ್ ಆಯುಕ್ತರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಿಹಾರಿಕಾ ತೋಮರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.

ಆರು ಜನ ನಿಹಾಂಗ್‌ಗಳು ಗುರುದ್ವಾದ ಟೆರೇಸ್‌ಗೆ ಹೋಗುವ ಮೂರನೇ ಮಹಡಿಯ ಪ್ರವೇಶದ್ವಾರಕ್ಕೆ ಒಳಗಿನಿಂದ ಬೀಗ ಹಾಕಿಕೊಂಡು ಇಡೀ ಪ್ರದೇಶವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಅಥವಾ ಕಾರ್ಯಾಚರಣೆ ನಡೆಸದಂತೆ ನಿಹಾಂಗ್‌ಗಳು ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ವೃದ್ಧ ಭಕ್ತನನ್ನು ಜೊತೆಯಲ್ಲೇ ಇಟ್ಟುಕೊಂಡು ಛಾವಣಿ ಮೇಲಿಂದ ಘೋಷಣೆಗಳನ್ನು ಕೂಗಿದ್ದಾರೆ.

ಬದರಿನಾಥ ಹೆದ್ದಾರಿಯಲ್ಲಿರುವ ಈ ನಾಗರಸು ಗುರುದ್ವಾರವು ಹೇಮಕುಂಡ್ ಸಾಹಿಬ್‌ಗೆ ಹೋಗಿ ಬರುವ ಸಿಖ್ ಯಾತ್ರಿಕರಿಗೆ ಆಶ್ರಯ ನೀಡುವ ಪ್ರಮುಖ ಕೇಂದ್ರವಾಗಿದೆ. ಸದ್ಯ ಪೊಲೀಸರು ನಿಹಾಂಗ್‌ಗಳ ಮನವೊಲಿಸಲು ಪ್ರಯತ್ನಿಸುತ್ತಿದ್ದು, ಒತ್ತೆಯಾಳನ್ನು ಬಿಡುಗಡೆ ಮಾಡಿದರೆ ಅವರನ್ನು ಪಂಜಾಬ್‌ಗೆ ಸುರಕ್ಷಿತವಾಗಿ ಹಿಂತಿರುಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ ನಿಹಾಂಗಿಗಳು ಅಧಿಕಾಅರಿಗಳ ಮಾತುಗಳನ್ನು ಒಪ್ಪುತ್ತಿಲ್ಲ. ಸ್ಥಳದಲ್ಲಿ ಆತಂಕದ ವಾತಾವರಣ ಮುಂದುವರೆದಿದೆ.

ಪಂಜಾಬ್‌ನ ಮೊಹಾಲಿಯಿಂದ ಬಂದ ನಿಹಾಂಗ್ ಗುಂಪು, ತಮ್ಮ ಪ್ರತಿಭಟನಾಕಾರರಿಗಾಗಿ ಗುರುದ್ವಾರದಲ್ಲಿ ತಂಗಲು 50-60 ಕೊಠಡಿಗಳನ್ನು ನೀಡುವಂತೆ ಮ್ಯಾನೇಜ್‌ಮೆಂಟ್‌ಗೆ ಒತ್ತಾಯಿಸಿದೆ. ಆದರೆ, ಗುರುದ್ವಾರದ ವ್ಯವಸ್ಥಾಪಕ ಬಿಯಾಂತ್ ಸಿಂಗ್ ಅವರು ಅಷ್ಟು ಕೊಠಡಿಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದಾಗ ನಿಹಾಂಗ್‌ಗಳು ಹಿಂಸಾಚಾರಕ್ಕೆ ಇಳಿದಿದ್ದಾರೆ.

ಜೂನ್ 16 ರಂದು ಚಮೋಲಿಯ ಕರ್ಣಪ್ರಯಾಗ ಮಾರುಕಟ್ಟೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ಥಳೀಯರು ಮತ್ತು ನಿಹಾಂಗ್ ಯಾತ್ರಿಕರ ನಡುವೆ ಭೀಕರ ತಲವಾರ್ ದಾಳಿ ನಡೆದಿತ್ತು. ನಾಲ್ವರು ಸ್ಥಳೀಯರು ಗಾಯಗೊಂಡಿದ್ದ ಈ ಘಟನೆಯಲ್ಲಿ ಪೊಲೀಸರು ಪಂಜಾಬ್‌ನ ನಾಲ್ವರು ನಿಹಾಂಗ್‌ಗಳನ್ನು ಬಂಧಿಸಿದ್ದರು. ಈಗ ಈ ನಾಲ್ವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಈ ಒತ್ತೆಯಾಳು ಸಂಚು ರೂಪಿಸಿದ್ದಾರೆ ಎನ್ನಆಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ