LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಣೆ-ಪ್ರಮಾಣದ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ: ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಸಲಹೆ

ಬೆಂಗಳೂರು: ವಿಧಾನ ಪರಿಷತ್​​ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ್ದು, ಅವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸಲು ಮುಂದಾಗಿದ್ದಾರೆ. ಪಕ್ಷಕ್ಕೆ ದ್ರೋಹ ಬಗೆದವರು ಯಾರೆಂಬುದು ದೇವರ ಎದುರೇ ಬಯಲಾಗಲಿ ಎಂದು ನಿನ್ನೆಯಷ್ಟೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದರು. ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ಪಕ್ಷದ ಈ ನಿರ್ಧಾರಕ್ಕೆ ಕೆಲ ಹಿರಿಯ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ಅಪಚಾರಗಳಿಗೆ ರಾಜಕೀಯ ಪರಿಹಾರ ಕಂಡುಕೊಳ್ಳಬೇಕು. ಬದಲಾಗಿ ಪವಿತ್ರ ಕ್ಷೇತ್ರಗಳನ್ನು ಎಳೆದು ತರುವುದು ಸೂಕ್ತವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಕೂಡ ರಾಜ್ಯ ಬಿಜೆಪಿ ನಾಯಕರಿಗೆ ಕೆಲ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನ ಅಭಿಪ್ರಾಯದಲ್ಲಿ ಆಣೆ-ಪ್ರಮಾಣದ ವಿಚಾರವನ್ನು ಇಲ್ಲಿಗೆ ನಿಲ್ಲಿಸಿ. ಈ ಸರ್ಕಾರದಲ್ಲಿ ಯಾರನ್ನ ಬೇಕಾದರೂ ಬ್ಲಾಕ್‌ಮೇಲ್, ಬದಲಾವಣೆ ಮಾಡುತ್ತಾರೆ ಎಂದಿದ್ದಾರೆ.

ಕ್ರಾಸ್ ವೋಟಿಂಗ್ ಹೊಸದೇನಲ್ಲ. ಹೀಗಾಗಿ ಬಿಜೆಪಿಯವ್ರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗಬೇಡಿ. ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತ ಆಗಿದೆ, ಈಗಿನ ಸಿಎಂ ದಾರಾಳವಾಗಿದ್ದಾರೆ. ಆ ಕಾರಣಕ್ಕೆಅಭಿವೃದ್ಧಿ ಹೆಸರಲ್ಲಿ ಕ್ಷೇತ್ರದ ಜನರ ಮುಂದೆ ಹೋಗಲು ಕ್ರಾಸ್ ವೋಟ್ ಮಾಡಿರಬಹುದು. ಇದನ್ನ ಇಲ್ಲಿಗೆ ಬಿಟ್ಟುಬಿಡಿ ಎಂದು ಸಲಹೆ ನೀಡಿದ್ದಾರೆ.

ರಾಜಕೀಯದಲ್ಲಿ ಆಗಿರುವ ಅಪಚಾರಗಳಿಗೆ ರಾಜಕೀಯ ಉತ್ತರ ಕಂಡುಕೊಳ್ಳಬೇಕು. ಧರ್ಮಸ್ಥಳವು ನಾಡಿನ ಭಕ್ತರ ಶ್ರದ್ಧಾ ಕೇಂದ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಕಾಪಾಡಬೇಕು. ರಾಜಕೀಯದಲ್ಲಿ ನಡೆದಿರುವ ಅಡ್ಡಮತದಾನದಂತಹ ಅಪಸವ್ಯಗಳಿಗೆ ಪವಿತ್ರ ಕ್ಷೇತ್ರವನ್ನು ಎಳೆದು ತರುವುದು ಸರಿಯಲ್ಲ. ರಾಜಕೀಯ ಸಮಸ್ಯೆಗಳಿಗೆ ರಾಜಕೀಯ ಪರಿಹಾರವೇ ಉತ್ತಮ ಎಂದು ಬಿಜೆಪಿಯ ಹಿರಿಯ ಸುರೇಶ್ ಕುಮಾರ್ ಕೂಡ ಅಭಿಪ್ರಾಯಪಟ್ಟಿದ್ದಾರೆ.

ವಿಜಯೇಂದ್ರ ಅವರು ನೋವಿನಿಂದ ಈ ಮಾತುಗಳನ್ನು ಹೇಳಿದ್ದಾರೆ. ಆದರೆ, ಅಡ್ಡಮತದಾನ ಮಾಡಿದವರನ್ನು ಗುರುತಿಸಲು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವುದು ಪರಿಹಾರವಲ್ಲ. ಹಾಗೆ ಮಾಡಿದರೂ, ಸುಳ್ಳು ಹೇಳುವವನನ್ನು ಕಂಡುಹಿಡಿಯುವುದು ಕಷ್ಟವಾಗುತ್ತದೆ. ಇದರಿಂದ ಪವಿತ್ರ ಕ್ಷೇತ್ರದ ಶ್ರದ್ಧೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ