ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ. 5,000 ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 4ನೇ ರಾಷ್ಟ್ರೀಯ ಕೈಮಗ್ಗ ಗಣತಿ ಪಟ್ಟಿಯಲ್ಲಿ ನೋಂದಾಯಿತರಾಗಿ ‘ಪೆಹಚಾನ್ ಕಾರ್ಡ್’ ಹೊಂದಿರಬೇಕು ಹಾಗೂ ಪ್ರಸ್ತುತ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರಬೇಕು.
ಪಿಎಂಎಸ್ಬಿವೈ ಯೋಜನೆ: ನೇಕಾರರು ಕಡ್ಡಾಯವಾಗಿ ಪಿಎಂಎಸ್ಬಿವೈ ಯೋಜನೆಯಡಿ ನೋಂದಾಯಿಸಿಕೊಂಡಿರಬೇಕು. ಅರ್ಹ ನೇಕಾರರು ನಿಗದಿತ ನಮೂನೆಯಲ್ಲಿ ತಮ್ಮ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ವಿವರಗಳೊಂದಿಗೆ ದಿನಾಂಕ: 30.06.2026 ರ ಒಳಗೆ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ,
ಜಿಲ್ಲಾ ಪಂಚಾಯತ್, ಮಂಜುನಾಥ್ ಟವರ್ಸ್, 2ನೇ ಮಹಡಿ, ಗಾಂಧಿ ನಗರ, 1ನೇ ಮುಖ್ಯ ರಸ್ತೆ, ಶಿವಮೊಗ್ಗ – 577201 ಅರ್ಜಿ ಸಲ್ಲಿಸಬೇಕು.ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ವಿವರಗಳನ್ನು ಸರ್ಕಾರದ ‘ಸೇವಾಸಿಂಧು’ ಪೋರ್ಟಲ್ನಲ್ಲಿ ಭರ್ತಿ ಮಾಡಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08182-223405 ಅನ್ನು ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ/ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಭೇಟಿ ನೀಡಿ, ಜೂನ್ 25 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 2025-26ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. 10ನೇ ತರಗತಿಯ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡಾವಾರು 60ರಷ್ಟು ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು ದಿನಾಂಕ 01.06.2009 ರಿಂದ 31.07.2011 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕಕ್ಕಾಗಿ ವಿದ್ಯಾಲಯದ ಅಧಿಕೃತ ಇಮೇಲ್ ([email protected]) ಅಥವಾ ವೆಬ್ಸೈಟ್ (https://navodaya.gov.in/…/SHIMOGA/en/home/index.html) ಅನ್ನು ಗಮನಿಸಬಹುದಾಗಿದೆ