LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ ಕಂಬನಿ ಮಿಡಿದ ಭಕ್ತಸಾಗರ

ಕನಕಪುರ: ಕನಕಪುರದ ಪುರಾಣ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಶ್ರೀ ದೇಗುಲ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ (84) ಅವರು ಶಿವೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮೂರು ದಿನಗಳ ಹಿಂದಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ.

ಧರ್ಮ, ಶಿಕ್ಷಣ ಮತ್ತು ದಾಸೋಹ ಪರಂಪರೆಯನ್ನು ಜಿಲ್ಲೆಯಾದ್ಯಂತ ಬೆಳೆಸಿ, ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದ ಶ್ರೀಗಳ ನಿಧನದ ವಾರ್ತೆ ಕೇಳಿ ರಾಜ್ಯಾದ್ಯಂತ ಭಕ್ತ ಸಮೂಹ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಠದ ಆವರಣದಲ್ಲಿ ಕಣ್ಣೀರಿನ ಮಹಾಪೂರವೇ ಹರಿದಿದೆ.

ಇಂದು ಬೆಳಗ್ಗೆಯಿಂದಲೇ ದೇಗುಲ ಮಠದ ಆವರಣದಲ್ಲಿ ಶ್ರೀಗಳ ಪಾರ್ಥಿವ ಶರೀರವನ್ನು ಸಾರ್ವಜನಿಕರು ಹಾಗೂ ಭಕ್ತಾದಿಗಳ ಅಂತಿಮ ದರ್ಶನಕ್ಕಾಗಿ ಇಡಲಾಗಿದೆ. ಹರ-ಗುರು ಚರಮೂರ್ತಿಗಳು, ವಿವಿಧ ಮಠಾಧೀಶರು ಹಾಗೂ ಸಹಸ್ರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತು ಪೂಜ್ಯರ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸುತ್ತಿದ್ದಾರೆ.

ಮಠಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ದೇಗುಲ ಮಠದೊಂದಿಗೆ ದಶಕಗಳ ಅವಿನಾಭಾವ ಸಂಬಂಧ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 10 ಗಂಟೆಗೆ ಕನಕಪುರ ದೇಗುಲ ಮಠಕ್ಕೆ ಖುದ್ದಾಗಿ ಭೇಟಿ ನೀಡಿದ್ದಾರೆ. ಶ್ರೀಗಳ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ, ಪೂಜ್ಯರ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾವನಾತ್ಮಕ ಟ್ವೀಟ್

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಶ್ರೀಗಳ ಅಗಲಿಕೆಗೆ ತೀವ್ರ ದುಃಖ ವ್ಯಕ್ತಪಡಿಸಿ ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ:

“ಕನಕಪುರದ ಪುರಾಣ ಪ್ರಸಿದ್ಧ ಮಠಗಳಲ್ಲಿ ಒಂದಾದ ಶ್ರೀ ದೇಗುಲ ಮಠದ ಹಿರಿಯ ಪೂಜ್ಯರಾದ ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳವರು ಶಿವೈಕ್ಯರಾದ ವಿಷಯ ತಿಳಿದು ಬಹಳ ದುಃಖವಾಯಿತು. ದೈವ ಸೇವೆಯ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದು ಜನರನ್ನು ಸಾತ್ವಿಕ ಮತ್ತು ಭಕ್ತಿಮಾರ್ಗದಲ್ಲಿ ಮುನ್ನಡೆಸಿದ ಶ್ರೀಗಳ ಅಗಲಿಕೆ ನನಗೆ ಅತೀವ ದುಃಖ ತಂದಿದೆ. ಆ ಪರಮಶಿವನು ಪರಮಪೂಜ್ಯರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಭಕ್ತ ಸಮೂಹಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ.”

ಮುಗಿಲು ಮುಟ್ಟಿದ ಭಕ್ತರ ಆಕ್ರಂದನ

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಇದರೊಂದಿಗೆ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ರಾಜ್ಯ ರಾಜಕಾರಣದ ನಾನಾ ಪಕ್ಷಗಳ ಮುಖಂಡರು ಹಾಗೂ ಗಣ್ಯರು ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ