LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಲ್ಲಿ ಕ್ರಾಸ್‌ ವೋಟಿಂಗ್‌ ಚರ್ಚೆ ಜೋರಾಗಿದೆ: ಮಾಹಿತಿ ಬಹಿರಂಗಪಡಿಸಿದ ನಾಯಕರಿಗೆ ಹೈಕಮಾಂಡ್‌ ತರಾಟೆ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಕಿಡಿ ಈಗ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾರಿ ಬಿರುಗಾಳಿಯನ್ನೇ ಎಬ್ಬಿಸಿದೆ ಅಡ್ಡ ಮತದಾನದ ಕಂಪ್ಲೀಟ್ ರಿಪೋರ್ಟ್ ನೀಡಲು ದಿಢೀರನೆ ದೆಹಲಿಗೆ ಹಾರಿದ್ದ ರಾಜ್ಯ ಬಿಜೆಪಿ ನಾಯಕರು ವರಿಷ್ಠರ ಸಭೆ ಮುಗಿಸಿ ಸಿಲಿಕಾನ್ ಸಿಟಿಗೆ ವಾಪಸಾಗಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಒಬ್ಬರೇ ಹೈಕಮಾಂಡ್ ಜೊತೆ ಹೆಚ್ಚಿನ ಚರ್ಚೆಗಾಗಿ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಸಮ್ಮುಖದಲ್ಲೇ ನಡೆದ 45 ನಿಮಿಷಗಳ ಹೈವೋಲ್ಟೇಜ್ ಸಭೆಯಲ್ಲಿ, ವರಿಷ್ಠರು ರಾಜ್ಯ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಲ್ಲದೆ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ

ರಾಜ್ಯ ನಾಯಕರಿಗೆ ಹೈಕಮಾಂಡ್ ಹಾಕಿದ ಆ 11 ಕಠಿಣ ಪ್ರಶ್ನೆಗಳು

ಚುನಾವಣೆ ಘೋಷಣೆಯಾದ ದಿನದಿಂದ ಮತದಾನದ ದಿನದವರೆಗೆ ರಾಜ್ಯ ನಾಯಕರು ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ವರಿಷ್ಠರು ಒಂದರ ಮೇಲೊಂದರಂತೆ ಬರೋಬ್ಬರಿ 11 ಪ್ರಶ್ನೆಗಳನ್ನು ಕೇಳಿ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ:

ಚುನಾವಣೆ ಘೋಷಣೆಯಾದ ಬಳಿಕ ನೀವು ಒಟ್ಟು ಎಷ್ಟು ಸಭೆಗಳನ್ನು ನಡೆಸಿದ್ದೀರಿ?

ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯನ್ನು ಯಾವಾಗ ಮಾಡಿದ್ದೀರಿ?

ನಮ್ಮ ಶಾಸಕರ ಮತಗಳ ಹಂಚಿಕೆಯನ್ನು ಯಾವ ರೀತಿ ಪ್ಲಾನ್ ಮಾಡಿದ್ದೀರಿ?

ಶಾಸಕರಿಗೆ ಕಟ್ಟುನಿಟ್ಟಿನ ವಿಪ್ ಅನ್ನು ಯಾವಾಗ ಜಾರಿ ಮಾಡಿದ್ದೀರಿ?

ಅಡ್ಡ ಮತದಾನ ತಡೆಯಲು ನಿಮ್ಮ ಸಿದ್ಧತೆ ಯಾವ ರೀತಿ ಇತ್ತು?

ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿ ವರದಿಯಿಂದ ಈಗ ನಮಗೆ ಏನು ಮಾಹಿತಿ ಸಿಗಲಿದೆ?

ಕೊನೆ ಕ್ಷಣದ ಬದಲು, ಶಾಸಕಾಂಗ ಪಕ್ಷದ ಸಭೆಯನ್ನು 2-3 ದಿನ ಮುಂಚಿತವಾಗಿಯೇ ಮಾಡಬಹುದಿತ್ತಲ್ವಾ?

ಮೈತ್ರಿ ಪಕ್ಷ ಜೆಡಿಎಸ್ (JDS) ಜೊತೆ ನೀವು ಎಷ್ಟು ಸಭೆಗಳನ್ನು ಮಾಡಿದ್ದೀರಿ?

ಜೆಡಿಎಸ್ ಅಭ್ಯರ್ಥಿಗೆ ಹಾಕುವ ಬಿಜೆಪಿ ಮತಗಳ ಬಗ್ಗೆ ಅವರಿಗೆ ಮೊದಲೇ ಕಂಪ್ಲೀಟ್ ಮಾಹಿತಿ ಕೊಟ್ಟಿದ್ದೀರಾ?

ಮೊದಲೇ ಅನುಮಾನ ಇದ್ದ ಶಾಸಕರ ಜೊತೆ ನೀವು ಮತ್ತೊಮ್ಮೆ ಮಾತುಕತೆ ನಡೆಸಿ ಇಲ್ವಾ?

ನಿಮ್ಮ ಇಷ್ಟೂ ಪ್ಲಾನಿಂಗ್‌ನಲ್ಲಿ ಲೋಪವಾಗಿದ್ದೆಲ್ಲಿ?

ವರಿಷ್ಠರ ಮುಂದೆ ರಾಜ್ಯ ನಾಯಕರು ಕೊಟ್ಟ ಭರ್ಜರಿ ಕೌಂಟರ್ ವಿವರಣೆ

ವರಿಷ್ಠರ ಈ ತೀಕ್ಷ್ಣ ಪ್ರಶ್ನಾವಳಿಗಳಿಗೆ ಉತ್ತರಿಸಿರುವ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ಹೂಡಲು ಕೊನೆ ಕ್ಷಣದವರೆಗೆ ಕಾಯಬೇಕಾಯಿತು ಎಂದು ಸಮರ್ಥಿಸಿಕೊಂಡಿದ್ದಾರೆ:

ಹಣದ ಆಮಿಷಕ್ಕೆ ಬಲಿಯಾಗಿದ್ದಾರೆ: “ಕಾಂಗ್ರೆಸ್ ನಾಯಕರು ಭಾರಿ ಪ್ರಮಾಣದ ಹಣದ ಆಮಿಷ ಒಡ್ಡಿ ನಮ್ಮ ಶಾಸಕರಿಂದ ಅಡ್ಡ ಮತದಾನ ಮಾಡಿಸಿದ್ದಾರೆ. ಹಣ ಪಡೆದೇ ನಮ್ಮವರು ವಿಪ್ ಉಲ್ಲಂಘಿಸಿದ್ದಾರೆ” ಎಂದು ರಾಜ್ಯ ನಾಯಕರು ವರಿಷ್ಠರಿಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ಕೊನೆ ಕ್ಷಣದಲ್ಲಿ ವಿಪ್ ಯಾಕೆ?: “ನಮ್ಮ ತಂತ್ರಗಾರಿಕೆ ಮತ್ತು ಮತಗಳ ಹಂಚಿಕೆಯ ಪ್ಲಾನ್ ಕಾಂಗ್ರೆಸ್ ಪಾಳಯಕ್ಕೆ ಮೊದಲೇ ತಿಳಿಯಬಾರದು ಎಂಬ ಏಕೈಕ ಕಾರಣಕ್ಕೆ ಕೊನೆಯ ಕ್ಷಣದಲ್ಲಿ ವಿಪ್ ನೀಡಲಾಗಿತ್ತು. ಪ್ರತಿಯೊಬ್ಬ ಶಾಸಕರ ಜೊತೆ ವೈಯಕ್ತಿಕವಾಗಿ ಮಾತನಾಡಲಾಗಿತ್ತು” ಎಂದು ವಿವರಿಸಿದ್ದಾರೆ.

ಹೆಚ್ಚಿನ ಸಮಯಕ್ಕೆ ಬೇಡಿಕೆ: ಇಡೀ ಎಪಿಸೋಡ್‌ನ ಇಂಚಿಂಚು ಖಚಿತ ಮಾಹಿತಿಯೊಂದಿಗೆ ಪಕ್ಕಾ ರಿಪೋರ್ಟ್ ಸಲ್ಲಿಸಲು ನಮಗೆ ಇನ್ನು ಸ್ವಲ್ಪ ಕಾಲಾವಕಾಶ ಬೇಕು ಎಂದು ಹೈಕಮಾಂಡ್ ಬಳಿ ಕೇಳಿದ್ದಾರೆ.

ಹೈಕಮಾಂಡ್ ನೀಡಿದ ಖಡಕ್ ಇನ್ಸ್ಟ್ರಕ್ಷನ್ ಏನು?

ರಾಜ್ಯ ನಾಯಕರ ವಿವರಣೆ ಆಲಿಸಿದ ವರಿಷ್ಠರು ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶಿಸ್ತು ಉಲ್ಲಂಘನೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ:

“ಸಿ.ಟಿ. ರವಿ ಸಮಿತಿ ವರದಿಯನ್ನು ಶೀಘ್ರವಾಗಿ ದೆಹಲಿಗೆ ಕಳುಹಿಸಿಕೊಡಿ.”

“ಅಶೋಕ್ ಮತ್ತು ವಿಜಯೇಂದ್ರ ಅವರು ಈ ಚುನಾವಣೆಯಲ್ಲಿ ಇನ್ನಷ್ಟು ಹೆಚ್ಚಿನ ತಯಾರಿ ಮಾಡಿಕೊಳ್ಳಬೇಕಿತ್ತು (ನಿಮ್ಮ ಕಡೆಯಿಂದಲೂ ಲೋಪವಾಗಿದೆ).”

“ನಾವು ನಮ್ಮದೇ ಆದ ಗುಪ್ತಚರ ಮೂಲಗಳಿಂದಲೂ ಕಂಪ್ಲೀಟ್ ಮಾಹಿತಿ ಸಂಗ್ರಹಿಸುತ್ತಿದ್ದೇವೆ, ಸೂಕ್ತ ಸಮಯ ನೋಡಿ ದ್ರೋಹ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ.”

“ಅಗತ್ಯ ಬಿದ್ದರೆ ಇಡೀ ತಂಡವನ್ನು ಮತ್ತೊಮ್ಮೆ ತುರ್ತಾಗಿ ದೆಹಲಿಗೆ ಕರೆಯಿಸಿಕೊಳ್ಳುತ್ತೇವೆ.”

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ