LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡಮತದಾನ ವಿಚಾರ: ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ವಿಧಾನ ಪರಿಷತ್ ಚುನವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ಬೆನ್ನಲ್ಲೇ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಶಾಸಕರು ಆಣೆ-ಪ್ರಮಾಣ ಮಾಡುವಂತೆ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ಸಜ್ಜಾಗಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಸತ್ಯಾಸತ್ಯತೆ ತಿಳಿಯಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ, ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲು ಮೊದಲು ಯೋಜಿಸಲಾಗಿತ್ತು. ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಬೇಕು ಎಂದು ವಿಜಯೇಂದ್ರ ಹೇಳಿದ್ದರು. ಆದರೆ, ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಇಂತಹ ರಾಜಕೀಯ ಸಭೆ ಹಾಗೂ ಆಣೆ-ಪ್ರಮಾಣದ ರಾಜಕಾರಣ ಮಾಡುವುದಕ್ಕೆ ಪಕ್ಷದ ಹಿರಿಯ ನಾಯಕರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದಾಗಿ ಧರ್ಮಸ್ಥಳದಲ್ಲಿ ಶಾಸಕಾಂಪ್ಗ ಪಕ್ಷದ ಸಭೆ ಹಾಗೂ ಆಣೆ-ಪ್ರಮಾಣ ನಿರ್ಧಾರವನ್ನು ಕೈಬಿಡಲಾಗಿತ್ತು.

ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಗೊಂದಲಗಳಿಂದಾಗಿ ಈ ಬೆಳವಣಿಗೆಗಳ ಬಗ್ಗೆ ವಿಜಯೇಂದ್ರ ಅವರನ್ನೇ ಪಕ್ಷದ ಕೆಲ ನಾಯಕರು ದೂಷಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡಿರುವ ವಿಜಯೇಂದ್ರ ಏಕಾಂಗಿಯಾಗಿ ಧರ್ಮಸ್ಥಳಕ್ಕೆ ತೆರಳಲು ನಿರ್ಧರಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಇಂದು ರಾತ್ರಿ ನೇರವಾಗಿ ಮಂಗಳೂರಿಗೆ ಬರಲಿದ್ದು, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ