ಶಿವಮೊಗ್ಗ: ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಆನವೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
9ನೇ ತರಗತಿ ವಿದ್ಯಾರ್ಥಿ ಸುಮಂತ್ ಮೇಲೆ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಪೇಪರ್ ಅನ್ನು ಕಸದ ಬುಟ್ಟಿಗೆ ಎಸೆಯುವಾಗ ವಿದ್ಯಾರ್ಥಿನಿಗೆ ತಾಗಿತ್ತು. ಹುಡುಗರು ತೊಂದರೆ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಕಂಪ್ಯೂಟರ್ ಶಿಕ್ಷಕನ ಬಳಿ ದೂರು ನೀಡಿದ್ದರು. ವಿದ್ಯಾರ್ಥಿ ಸುಮಂತನಿಗೆ ಶಿಕ್ಷಕ ಥಳಿಸಿದ್ದಾನೆ. ಸುಮಂತ್ ತೀವ್ರವಾಗಿ ಗಾಯಗೊಂಡು ರಕ್ತ ಹೆಪ್ಪುಗಟ್ಟಿ ಜ್ವರ ಬಂದ ಹಿನ್ನೆಲೆಯಲ್ಲಿ ನಾನು ವಸತಿ ಶಾಲೆಯಲ್ಲಿ ಇರುವುದಿಲ್ಲ ಎಂದು ಪೋಷಕರಿಗೆ ಹೇಳಿದ್ದ. ನನ್ನನ್ನು ಕರೆದುಕೊಂಡು ಹೋಗಿ ಎಂದು ಪೋಷಕರಿಗೆ ತಿಳಿಸಿದ್ದ. ಪೋಷಕರು ಹೋದಾಗ ತೀವ್ರವಾದ ಜ್ವರದಿಂದ ಬಳಲುತ್ತಿದ್ದ ಕೂಡಲೇ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದಾರೆ. ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.