LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಧಾರಣ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆಯ ಸುಳಿವಿಲ್ಲ. ಮೋಡಕವಿದ ವಾತಾವರಣ ಆಗಾಗ ಬಿಸಿಲು ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಮನ್ ಕಿ ಬಾತ್: ತಮ್ಮ ಮನವಿ ಬೆಂಬಲಿಸಿದ ದೇಶದ ಜನತೆಗೆ ಪ್ರಧಾನಿ ಮೋದಿ ಧನ್ಯವಾದಉಲ್ಟಾ ಪಲ್ಟಾ ಸಿನಿಮಾ ಖ್ಯಾತಿಯ ನಿರ್ದೇಶಕ ಎನ್.ಎಸ್.ಶಂಕರ್ ಹೃದಯಾಘಾತಕ್ಕೆ ಬಲಿಬೆಂಗಳೂರಿನಲ್ಲಿ ಕಸದ ಸಮಸ್ಯೆ ನಿವಾರಣೆಗೆ GBA ಮಾಸ್ಟರ್ ಪ್ಲಾನ್: ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಸಂಜೆ ವೇಲೆಯೂ ಕಸ ಸಂಗ್ರಹಸಾಧಾರಣ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣರೈತರ ಆರ್​​ಟಿಸಿಗಳಲ್ಲಿ ವಕ್ಫ್ ಎಂದು ಉಲ್ಲೇಖ: ನಾಡಿನ ರೈತರ ಅಸ್ತಿತ್ವಕ್ಕೇ ಕುತ್ತು ತರುವ ಸ್ಥಿತಿ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶಕರಾಚಿ ರೇಂಜರ್ಸ್ ಪ್ರಧಾನ ಕಚೇರಿಯಲ್ಲಿ ಗುಂಡಿನ ಚಕಮಕಿ: 4 ಸೈನಿಕರು, 6 ಭಯೋತ್ಪಾದಕರು ಸಾವುಬಿಡದಿ ಟೌನ್ ಶಿಪ್ ವಿರೋಧಿ ಹೋರಾಟ ರಾಜ್ಯವ್ಯಾಪಿ ರೈತ ಚಳವಳಿಯಾಗಿ ರೂಪಿಸಲು HDK ಮಾಸ್ಟರ್ ಪ್ಲ್ಯಾನ್ಮಾದಕ ವಸ್ತು ವಿರುದ್ಧ ಸಮರ: ಸಾಗಾಣೆ, ಬಳಕೆ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ದಿಟ್ಟ ಕ್ರಮಮಕ್ಕಳಿಗಾಗಿ ಹೆಲ್ತಿ ಅಂಡ್ ಟೇಸ್ಟಿ ಬ್ರೇಕ್‌ಫಾಸ್ಟ್: ಸುಲಭವಾಗಿ ಮಾಡಿ ರಾಗಿ ಚಾಕೊಲೇಟ್ ಪ್ಯಾನ್‌ಕೇಕ್