LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಯಾವಾಗ ರೀಲ್ಸ್ ಮಾಡ್ತೀರಾ ಸಚಿವ ಕೃಷ್ಣಬೈರೇಗೌಡ ಅವರೇ? ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರುಗೆ ಕಾಲೆಳೆದಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದು ಯಾವಾಗ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಜನತೆ ಪತ್ರಿಕೆಗೆ ಕಳುಹಿಸಿರುವ ನರಕಸದೃಶ ರಸ್ತೆಗುಂಡಿಗಳು ಫೋಟೋಗಳನ್ನು ಒಮ್ಮೆ ಕಣ್ಣು ಬಿಟ್ಟು ನೋಡಿ! ವಿನಾಯಕ ಲೇಔಟ್ ನಾಗರಭಾವಿ, ಮುದ್ದಿನಪಾಳ್ಯ ರಸ್ತೆ, ಜಯನಗರ 8ನೇ ಬ್ಲಾಕ್… ಹೀಗೆ ರಾಜಧಾನಿಯ ಪ್ರತಿ ರಸ್ತೆಯಲ್ಲೂ ಈಗ ‘ಗುಂಡಿಗಳದ್ದೇ ದರ್ಬಾರ್’!

ಬೆಂಗಳೂರನ್ನು “Failed Model” ಎಂದು ಕರೆಯುವ ಮೂಲಕ ಬ್ರ್ಯಾಂಡ್ ಬೆಂಗಳೂರು ನಿರ್ಮಿಸುತ್ತೇವೆ ಎಂದು ಕೊಚ್ಚಿಕೊಳ್ಳುತ್ತಿದ್ದ ನಿಮ್ಮ ಮುಖ್ಯಮಂತ್ರಿಗಳ ಅಸಲಿ ಬಂಡವಾಳವನ್ನ ನೀವೇ ಬಯಲು ಮಾಡಿದ್ದೀರಿ.

ಬೆಂಗಳೂರಿನ ಇಂದಿನ ದುಸ್ಥಿತಿಗೆ ನೇರ ಹೊಣೆಗಾರರು ನಿಮ್ಮ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಎಂದು ಒಪ್ಪಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದೀರಾ ಕೃಷ್ಣ ಭೈರೇಗೌಡರೇ? ಅಥವಾ ಇದನ್ನು ಸರಿಪಡಿಸಲು ಸಾಧ್ಯವೇ ಇಲ್ಲ ಎಂದು ಕೈಚೆಲ್ಲಿದೀರಾ? ಎಂದು ಕೇಳಿದ್ದಾರೆ.

ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಬೆಂಗಳೂರಿನ ನಾಗರಿಕರ ತೆರಿಗೆ ಹಣ ಬೇಕು, ಆದರೆ ಅವರಿಗೆ ಸುರಕ್ಷಿತ ರಸ್ತೆ ಕೊಡುವ ಯೋಗ್ಯತೆ ಇಲ್ಲ. ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ಉಸ್ತುವಾರಿ ಸಚಿವರ ವೈಫಲ್ಯದಿಂದಾಗಿ ಜನರ ದಿನನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಇದೆ.

ಕ್ಯಾಮೆರಾ ಮುಂದೆ ಅಧಿಕಾರಿಗಳನ್ನು ಗದರಿಸಿ ರೀಲ್ಸ್ ಮಾಡುವ ನಾಟಕ ಸಾಕು ಮಾಡಿ, ಮೊದಲು ರಸ್ತೆಗಿಳಿದು ಈ ಗುಂಡಿಗಳನ್ನು ಮುಚ್ಚಿಸಿ. ಇಲ್ಲದಿದ್ದರೆ ಬೆಂಗಳೂರಿನ ಜನ ನಿಮಗೆ ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದು ಕಿಡಿಕಾರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ನಾಳೆಯಿಂದ SIR ಆರಂಭ: ಮನೆ ಮನೆಗೂ ಭೇಟಿ ನೀಡಲಿದ್ದಾರೆ ಚುನಾವಣಾಧಿಕಾರಿಗಳು: ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಮಾಹಿತಿಮೊದಲು ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡಲಿ; ಬಳಿಕ ಚುನವಣಾ ಆಯೋಗ SIR ಆರಂಭಿಸಲಿ: ಸಚಿವ ಪ್ರಿಯಾಂಕ್ ಖರ್ಗೆBREAKING: ಅಬಕಾರಿ ಡಿಸಿ ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿBIG NEWS : ಜುಲೈ 1ರಿಂದ ‘LPG’ ಗ್ರಾಹಕರಿಗೆ ಹೊಸ ನಿಯಮ ; ಈ ಕೆಲಸ ಮಾಡದಿದ್ದರೆ ಗ್ಯಾಸ್ ಸಂಪರ್ಕ ರದ್ದಾಗಬಹುದು !BREAKING : ವಿಜಯೇಂದ್ರರನ್ನು ‘ಕಿತ್ತು ಬಿಸಾಕಿ’ ಎಂದರಾ ಮಾಜಿ ಸಿಎಂ ಸದಾನಂದ ಗೌಡ ? ಸಂಚಲನ ಸೃಷ್ಟಿಸಿದ ವೈರಲ್ ಆಡಿಯೋ |WATCH VIDEOBIG NEWS: ಆಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಡಿ.ವಿ.ಸದಾನಂದಗೌಡಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಉಚ್ಚಾಟನೆಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಯಾವಾಗ ರೀಲ್ಸ್ ಮಾಡ್ತೀರಾ ಸಚಿವ ಕೃಷ್ಣಬೈರೇಗೌಡ ಅವರೇ? ಆರ್.ಅಶೋಕ್ ಪ್ರಶ್ನೆಮುಂಗಾರು ಬೆಳೆ ವಿಮೆ ನೋಂದಣಿ ಆರಂಭ ; ರೈತರು ಶೀಘ್ರ ನೋಂದಾಯಿಸಿಕೊಳ್ಳುವಂತೆ ಮನವಿ.!SHOCKING : ಪತ್ನಿ ಹಾಗೂ ಕುಟುಂಬದವರಿಂದ ಮಾನಸಿಕ ಕಿರುಕುಳ ಆರೋಪ ; ವಿಡಿಯೋ ಪೋಸ್ಟ್ ಮಾಡಿ ಪತಿ ಆತ್ಮಹತ್ಯೆ |WATCH VIDEO