ಕೊಲ್ಕತ್ತಾ: ಮದ್ರಸಾಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದರಲ್ಲಿ ತಪ್ಪೇನಿದೆ..? ಮದ್ರಸಾಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದರಿಂದ ಆಕಾಶವೇನು ಕಳಚಿ ಬೀಳುವುದಿಲ್ಲ ಎಂದು ಕೊಲ್ಕತ್ತಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮದ್ರಸಾಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಪಠಿಸಬೇಕೆಂಬ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ಕೊಲ್ಕತ್ತಾ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ತಪಭೃತ ಚಕ್ರವರ್ತಿ ನೇತೃತ್ವದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಬೇರೆ ಸಂಪ್ರದಾಯದ ಪ್ರಾರ್ಥನೆಗಳನ್ನು ಹಾಡುವುದು ವ್ಯಕ್ತಿಯ ಧರ್ಮಕ್ಕೆ ಧಕ್ಕೆ ತರುವುದಿಲ್ಲ. ಸಾವಿರಾರು ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾರ್ಥನೆ ಕಡ್ಡಾಯಗೊಳಿಸಲಾಗಿದೆ. ಅಲ್ಲಿ ಇತರೆ ಸಮುದಾಯದ ವಿದ್ಯಾರ್ಥಿಗಳು ಕೂಡ ಭಾಗವಹಿಸುತ್ತಾರೆ ಎನ್ನುವ ಮಾತ್ರಕ್ಕೆ ಆಕಾಶವೇನು ಬಿದ್ದು ಹೋಗುವುದಿಲ್ಲ. ಬೇರೆ ಧರ್ಮದ ವಾಕ್ಯ ಹೇಳಿದರೆ ಆ ಧರ್ಮಕ್ಕೆ ಸೇರಿದ ವ್ಯಕ್ತಿಯಾಗುತ್ತಾನೆಯೇ ಎಂದು ಮುಖ್ಯ ನ್ಯಾಯಮೂರ್ತಿ ತಪಭೃತ ಚಕ್ರವರ್ತಿ ಪ್ರಶ್ನಿಸಿದ್ದಾರೆ.