ಮೈಸೂರು: ಮದುವೆ ನಿಶ್ಚಯವಾಗಿ ಹಸೆಮಣೆ ಏರಬೇಕಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸೆಂಬರ್ ನಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡಿಸೆಂಬರ್ ನಲ್ಲಿ ಹಸೆಮಣೆ ಏರಬೇಕಿದ್ದ ಎಸ್.ಬಿ.ಐ. ಮಹಿಳಾ ಉದ್ಯೋಗಿ ಅನುಶ್ರೀ(26) ಹುಣಸೂರಿನ ಮನೆಯಲ್ಲೇ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಕಾಟುಪಳ್ಳ ಗ್ರಾಮದ ಚಂದ್ರನ್ ಅವರ ಪುತ್ರಿ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಕೆಲವೇ ಗಂಟೆಯಲ್ಲಿ ಸ್ವಂತ ಊರಾದ ಇರಟ್ಟಿಯಲ್ಲಿ ಅನುಶ್ರೀ ಅವರನ್ನು ಮದುವೆಯಾಗಬೇಕಿದ್ದ ಯುವಕ ಅಮಲ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎಸ್.ಬಿ.ಐ.ನಲ್ಲಿ ಉದ್ಯೋಗಕ್ಕೆ ಸೇರಿದ ಅನುಶ್ರೀ ತರಬೇತಿಯ ವೇಳೆ ಪರಿಚಯವಾಗಿದ್ದ ಕೇರಳದ ಎರ್ನಾಕುಲಂ ಎಸ್.ಬಿ.ಐ. ಉದ್ಯೋಗಿ ಅಮಲ್ ಅವರನ್ನು ಪ್ರೀತಿಸಿದ್ದರು. ಡಿಸೆಂಬರ್ ನಲ್ಲಿ ಇವರ ಮದುವೆ ನಿಶ್ಚಯವಾಗಿತ್ತು. ಆದರೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)