LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯ ಹಬ್ಬದ ಹಿನ್ನೆಲೆ: ಭದ್ರತೆ, ಸಂಚಾರ ನಿರ್ವಹಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು-ಆಗಸ್ಟ್ 15ರಂದು ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೃಹ, ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸ್ವಾತಂತ್ರ್ಯ ಹಬ್ಬದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನ, ವಾಹನ ನಿಲುಗಡೆ ಹಾಗೂ ಜನದಟ್ಟಣೆ ನಿರ್ವಹಣೆ ಸೇರಿದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ವಿಶೇಷ ಅಂಶಗಳು

ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ದಿ ಪೀಪಲ್ಸ್ ಇಂಡಿಯಾ ಪೆರೇಡ್’, ವಿಧಾನಸೌಧದ ವಿಶೇಷ ಪ್ರವಾಸ, ಮಕ್ಕಳಿಗಾಗಿ ‘ಮಕ್ಕಳ ಮೇಳ’, ರಸಪ್ರಶ್ನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಕಚೇರಿ, ವಿವಿಧ ಜಿಲ್ಲೆಗಳ ಆಹಾರ ಮತ್ತು ಕರಕುಶಲ ಪ್ರದರ್ಶನಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ.

ಸಂಜೆ ಸಂಗೀತ ಕಾರ್ಯಕ್ರಮ ಹಾಗೂ ರಾತ್ರಿ ಪಟಾಕಿ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇರುವುದರಿಂದ ವಿಶೇಷ ಗಮನಹರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರ ಸುರಕ್ಷತೆಗೆ ಒತ್ತು

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸುಗಮ ಸಂಚಾರ ವ್ಯವಸ್ಥೆ, ಪಾದಚಾರಿಗಳ ಸುರಕ್ಷತೆ, ತುರ್ತು ಸೇವೆಗಳಿಗೆ ಅಗತ್ಯ ವ್ಯವಸ್ಥೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ ಸಚಿವರು, ಕಾರ್ಯಕ್ರಮದ ವೇಳೆ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ರೀತಿಯ ಲೋಪವಾಗದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆ, ಜಿಬಿಎ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ