LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ಚಿಕ್ಕ ಪಾನ್ ಅಂಗಡಿಗೆ ₹1.85 ಲಕ್ಷ ವಿದ್ಯುತ್ ಬಿಲ್ ; ಭಯದಿಂದ ವ್ಯಾಪಾರಿ ಆತ್ಮಹತ್ಯೆ.!

ಉತ್ತರ ಪ್ರದೇಶದ Ghazipur ಜಿಲ್ಲೆಯ ಸೈದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುರಾದ್‌ಚಕ್ ಗ್ರಾಮದಲ್ಲಿ ನಡೆದ ದುರ್ಘಟನೆ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಅತಿಯಾದ ವಿದ್ಯುತ್ ಬಿಲ್, ಭಾರೀ ದಂಡ ಹಾಗೂ ಅಧಿಕಾರಿಗಳ ಒತ್ತಡದಿಂದ ಮನನೊಂದು ಪಾನ್ ಅಂಗಡಿ ಮಾಲೀಕ ಸುರೇಂದ್ರ ಕಶ್ಯಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಬರೆದಿರುವ ಆತ್ಮಹತ್ಯೆ ಪತ್ರ ಇದೀಗ ಸರ್ಕಾರದ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ವಿವರಗಳ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ವಿದ್ಯುತ್ ಇಲಾಖೆಯ ವಿಜಿಲೆನ್ಸ್ ತಂಡ ಸುರೇಂದ್ರ ನಡೆಸುತ್ತಿದ್ದ ಸಣ್ಣ ಅಂಗಡಿಯಲ್ಲಿ ಪರಿಶೀಲನೆ ನಡೆಸಿತ್ತು. ಈ ವೇಳೆ ವಿದ್ಯುತ್ ಬಳಕೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪದಡಿ ಸುಮಾರು ₹1.12 ಲಕ್ಷ ದಂಡ ವಿಧಿಸಲಾಗಿತ್ತು. ಜೊತೆಗೆ ಬಾಕಿ ಉಳಿದಿದ್ದ ವಿದ್ಯುತ್ ಬಿಲ್ಲನ್ನೂ ಪಾವತಿಸುವಂತೆ ಸೂಚಿಸಲಾಗಿತ್ತು.

ಕನಿಕರ ತೋರದ ಅಧಿಕಾರಿಗಳು

ನಂತರ ಪ್ರಕರಣ ತಹಶೀಲ್ದಾರ್ ಕಚೇರಿಗೆ ತಲುಪಿದ ಹಿನ್ನೆಲೆಯಲ್ಲಿ ರಿಕವರಿ ಸರ್ಟಿಫಿಕೇಟ್ (RC) ಜಾರಿಯಾಯಿತು. ಇದರಿಂದ ಬಾಕಿ ಮೊತ್ತವು ಸುಮಾರು ₹1.85 ಲಕ್ಷಕ್ಕೆ ಏರಿಕೆಯಾಯಿತು ಎಂದು ತಿಳಿದುಬಂದಿದೆ.

ಇಷ್ಟು ದೊಡ್ಡ ಮೊತ್ತವನ್ನು ಪಾವತಿಸಲು ಸಾಧ್ಯವಾಗದಿದ್ದರೂ, ಬಿಲ್ ಮೊತ್ತವನ್ನು ಕಡಿಮೆ ಮಾಡುವಂತೆ ಸುರೇಂದ್ರ ಹಲವು ಬಾರಿ ವಿದ್ಯುತ್ ಇಲಾಖೆ ಹಾಗೂ ಕಂದಾಯ ಅಧಿಕಾರಿಗಳ ಮೊರೆ ಹೋಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಆದರೆ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡದೆ, ಹಣ ಪಾವತಿಸುವಂತೆ ನಿರಂತರ ಒತ್ತಡ ಹೇರಿದ್ದರು. ಅಂಗಡಿಯನ್ನು ಮುಚ್ಚಿಸುವುದಾಗಿ ಎಚ್ಚರಿಕೆ ನೀಡಿ ಹಲವು ಬಾರಿ ಕಿರುಕುಳ ನೀಡಿದ್ದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

“ನಾನು ಸತ್ತರೆ ಸಮಸ್ಯೆ ಮುಗಿಯುತ್ತದೆ”

ಮೃತರ ಪತ್ನಿ ಜ್ಞಾನತಿ ನೀಡಿದ ಮಾಹಿತಿಯ ಪ್ರಕಾರ, ಸುರೇಂದ್ರ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು.”ನಾನು ಸತ್ತರೆ ಈ ಬಿಲ್ ಸಮಸ್ಯೆ ಮುಗಿಯುತ್ತದೆ” ಎಂದು ಅವರು ಆಗಾಗ ಹೇಳುತ್ತಿದ್ದರು ಎಂದು ಪತ್ನಿ ಕಣ್ಣೀರಿಟ್ಟಿದ್ದಾರೆ.ಇಬ್ಬರು ಪುತ್ರಿಯರ ಭವಿಷ್ಯ, ಅವರ ಮದುವೆಯ ಹೊಣೆ, ಸಾಲದ ಭಾರ ಹಾಗೂ ಅಧಿಕಾರಿಗಳ ಒತ್ತಡ ಸೇರಿ ಅವರನ್ನು ತೀವ್ರ ನಿರಾಶೆಗೆ ತಳ್ಳಿತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಈ ಘಟನೆ ಬಳಿಕ ಗ್ರಾಮಸ್ಥರು ವಿದ್ಯುತ್ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಆತ್ಮಹತ್ಯೆಗೆ ಕಾರಣವಾದ ಪರಿಸ್ಥಿತಿಗಳು ಹಾಗೂ ಅಧಿಕಾರಿಗಳ ಪಾತ್ರದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿರುವ ವಿವರಗಳು ಹಾಗೂ ಕುಟುಂಬ ಸದಸ್ಯರ ಆರೋಪಗಳ ಆಧಾರದ ಮೇಲೆ ಪ್ರಕರಣದ ಸತ್ಯಾಂಶವನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ.

ವಿದ್ಯುತ್ ಬಿಲ್ ಹೆಚ್ಚು ಬಂದರೆ ದೂರು ನೀಡಬಹುದೇ?

ಪ್ರಶ್ನೆ: ವಿದ್ಯುತ್ ಬಿಲ್ ಹೆಚ್ಚು ಬಂದರೆ ದೂರು ನೀಡಬಹುದೇ?
ಉತ್ತರ: ಹೌದು.

ಪ್ರಶ್ನೆ: ವಿದ್ಯುತ್ ಬಿಲ್ ಹೆಚ್ಚು ಬಂದರೆ ಯಾರಿಗೆ ದೂರು ನೀಡಬೇಕು?
ಉತ್ತರ: ರಾಷ್ಟ್ರೀಯ ಟೋಲ್-ಫ್ರೀ ಸಹಾಯವಾಣಿ ಸಂಖ್ಯೆ 1912 ಗೆ ಕರೆ ಮಾಡಿ ದೂರು ದಾಖಲಿಸಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ